Advertisement

Gangavathi: ತುಂಗಭದ್ರಾ ಎಡದಂಡೆ ಕಾಲುವೆಗೆ ನೀರು ಬಿಡುಗಡೆ

03:53 PM Aug 03, 2023 | Team Udayavani |

ಗಂಗಾವತಿ: ತುಂಗಭದ್ರಾ ಎಡದಂಡೆ ಕಾಲುವೆಗೆ ಯೋಜನೆಯ ಮುಖ್ಯ ಅಭಿಯಂತರ ಬಸವರಾಜ್ ಆ.3ರ ಗುರುವಾರ ನೀರು ಬಿಡುಗಡೆ ಮಾಡಿದರು. ಬೆಳಿಗ್ಗೆ ಪೂಜಾ-ವಿಧಾನಗಳನ್ನು ಕೈಗೊಂಡು ನೀರು ಬಿಡುಗಡೆ ಮಾಡಿದರು.

Advertisement

ನಂತರ ಮಾತನಾಡಿದ ಅವರು, ಚೈನ್ 28 ಮೈಲ್ 10ರಲ್ಲಿ ಸಣ್ಣಪುಟ್ಟ ದುರಸ್ತಿ ಕಾರ್ಯ ಇದ್ದ ಪ್ರಯುಕ್ತ ಎಡದಂಡೆ ಕಾಲುವೆಗೆ ನೀರು ಹರಿಸುವುದು ತಡವಾಗಿದೆ. ಸರ್ಕಾರದ ಆದೇಶದಂತೆ ಕಾಲುವೆಗೆ ನೀರು ಹರಿಸಲಾಗುತ್ತಿದ್ದು, ಗುರುವಾರ 100  ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದು, ನೀರಿನ ಪ್ರಮಾಣವನ್ನು ಹಂತಹಂತವಾಗಿ ಹೆಚ್ಚಿಸಲಾಗುತ್ತದೆ ಎಂದರು.

ಎಇಇ ಅಮರೇಶ ಸೇರಿ ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳು, ರೈತ ಸಂಘದ ಮುಖಂಡರು ಈ ಸಂದರ್ಭದಲ್ಲಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next