Advertisement

ಎರಡನೇ ಪಟ್ಟಿಯಲ್ಲಿ ಹೆಸರು ಖಂಡಿತ: ಸಾಮಾಜಿಕ ಜಾಲತಾಣದಲ್ಲಿ ಮಾಜಿ ಸಚಿವ ಅನ್ಸಾರಿ ಆಡಿಯೋ ವೈರಲ್

11:12 AM Mar 28, 2023 | Team Udayavani |

ಗಂಗಾವತಿ: ಕಾಂಗ್ರೆಸ್ ಪಕ್ಷದ ಮೊದಲ ಪಟ್ಟಿಯಲ್ಲಿ ನನ್ನ ಹೆಸರಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳು ಬೇಸರ ಅಥವಾ ಆತಂಕಗೊಳ್ಳುವುದು ಬೇಡ ಎರಡನೇ ಪಟ್ಟಿಯಲ್ಲಿ ಇಕ್ಬಾಲ್ ಅನ್ಸಾರಿ ಹೆಸರು ಖಂಡಿತವಾಗಲೂ ಬರಲಿದೆ. ಈಗಾಗಲೇ ಕ್ಷೇತ್ರದಾದ್ಯಂತ ಕಾಂಗ್ರೆಸ್ ಪಕ್ಷದ ಸಂಘಟನೆ ಮಾಡಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜನರ ಆಶೀರ್ವಾದದಿಂದ ಗೆಲುವು ಪಡೆಯಲಾಗುತ್ತದೆ ಎಂದು ಇಕ್ಬಾಲ್ ಅನ್ಸಾರಿ ಹೇಳಿದ್ದಾರೆ.

Advertisement

ಅವರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಕಾರ್ಯಕರ್ತರು ಮತ್ತು ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿದ ಆಡಿಯೋವನ್ನು ಹರಿಬಿಟ್ಟು ಮೊದಲ ಪಟ್ಟಿಯಲ್ಲಿ ಅನ್ಸಾರಿ ಹೆಸರು ಇಲ್ಲದ್ದಕ್ಕಾಗಿ ಅಭಿಮಾನಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಬೇಜಾರು ಆತಂಕ ಮಾಡಿಕೊಂಡಿರುವುದು ಕುರಿತು ಅವರಿಗೆ ಸಮಾಧಾನದ ಮಾತುಗಳನ್ನು ಹೇಳಿದ್ದಾರೆ.

ಕೆಲವು ಕಾರಣಕ್ಕಾಗಿ ಮೊದಲಿನ ಕಾಂಗ್ರೆಸ್ ಪಟ್ಟಿಯಲ್ಲಿ ತಮ್ಮ ಹೆಸರು ಪ್ರಸ್ತಾಪವಾಗಿಲ್ಲ. ಎರಡನೇ ಪಟ್ಟಿಯಲ್ಲಿ ಖಂಡಿತವಾಗಿ ಇಕ್ಬಾಲ್ ಅನ್ಸಾರಿ ಹೆಸರು ಇರಲಿದೆ. ಗಂಗಾವತಿ ಕ್ಷೇತ್ರದಲ್ಲಿ ಈಗಾಗಲೇ ಕೆಲವು ಅನ್ಯ ಊರುಗಳಿಂದ ಆಗಮಿಸಿದ ವ್ಯಕ್ತಿಗಳು ಬಟ್ಟೆ ಹಾವು ಬಿಡುತ್ತಿದ್ದಾರೆ. ಅವರು ಖಾಲಿ ಡಬ್ಬ ಖಾಲಿಡಬ್ಬ ಹೆಚ್ಚು ಸೌಂಡ್ ಮಾಡುತ್ತದೆ. ಆದ್ದರಿಂದ ಯಾರು ಇದನ್ನು ತಲೆಕೆಡಿಸಿಕೊಳ್ಳಬಾರದು ಎಂದರು.

ಖಂಡಿತವಾಗಿ ಗಂಗಾವತಿಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಪಡೆಯಲಿದೆ. ನಾನು ಖಂಡಿತವಾಗಿ ಕಾಂಗ್ರೆಸ್ ನಿಂದಲೇ ಸ್ಪರ್ಧೆ ಮಾಡುತ್ತೇನೆ. ಗಾಳಿ ಸುದ್ದಿಗೆ ಕಿವಿಗೊಡಬಾರದು. ಕಾಂಗ್ರೆಸ್ ಸರಕಾರ 2023 ರಲ್ಲಿ ಅಧಿಕಾರಕ್ಕೆ ಬರಲಿದೆ. ಗಂಗಾವತಿ ನಗರ, ಗ್ರಾಮೀಣ ಭಾಗವನ್ನು ಅಭಿವೃದ್ಧಿ ಮಾಡಬೇಕಿದೆ ಎಂದು ಹೇಳಿದ್ದಾರೆ.

ಹೊರಗಿನಿಂದ ಒಳಗಿನಿಂದ ಅವರಿವರು ಬಂದಿದ್ದಾರೆಂದು ಆತಂಕ ಪಡುವುದು ಬೇಡ. ಎರಡನೇ ಪಟ್ಟಿಯಲ್ಲಿ ಅನ್ಸಾರಿ ಹೆಸರು ಇರುತ್ತದೆ ಎಂದು ತಿಳಿಸುವ ಉದ್ದೇಶದಿಂದ ಜರೂರಾಗಿ ಸಾಮಾಜಿಕ ಜಾಲತಾಣಕ್ಕೆ ಆಗಮಿಸಿ ಹೇಳಿಕೆಯನ್ನು ನೀಡುತ್ತಿದ್ದೇನೆ. ಶೀಘ್ರವಾಗಿ ಹೊರಗೆ ಬಂದು ನಿಮ್ಮೆಲ್ಲರ ಜತೆಗಿದ್ದು ಕಾಂಗ್ರೆಸ್ ಗೆಲ್ಲಿಸಿ ರಾಜ್ಯದಲ್ಲಿ ಅಧಿಕಾರಕ್ಕೆ ತರಬೇಕಿದೆ ಎಂದು ಆಡಿಯೋದಲ್ಲಿ ಹೇಳಿದ್ದಾರೆ.

Advertisement

ಹಾಲಿ ಶಾಸಕ ಪರಣ್ಣ ಮುನವಳ್ಳಿ ಹಾಗೂ ಮಾಜಿ ಸಚಿವ ಗಾಲಿ‌ ಜನಾರ್ದನ ರೆಡ್ಡಿ ವಿರುದ್ಧ ಖಾಲಿ ಡಬ್ಬಿ ಎನ್ನುವ ಮೂಲಕ ಪರೋಕ್ಷವಾಗಿ ಟೀಕಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next