Advertisement

ಮೃತ್ಯುಕೂಪವಾಗಿರುವ ಸಾಣಾಪೂರ ಕೆರೆ ಪ್ರವಾಸಿಗರ ಜೀವ ಉಳಿಸಲು ಜಿಲ್ಲಾಡಳಿತ ಮುಂದಾಗಲಿ

12:11 PM Oct 20, 2021 | Team Udayavani |

ಗಂಗಾವತಿ:  ಪ್ರವಾಸಿಗರ ಸ್ವರ್ಗ ಎಂದೂ ಕರೆಯಲ್ಪಡುವ ಕಿಷ್ಕಿಂದಾ ಪ್ರದೇಶದಲ್ಲಿರುವ ಸಾಣಾಪೂರ ಲೇಕ್(ಕೆರೆ) ಕಳೆದ ಹಲವು ವರ್ಷಗಳಿಂದ ಮೃತ್ಯುಕೂಪವಾಗುತ್ತಿದ್ದರೂ ಜಿಲ್ಲಾಡಳಿತ ಮತ್ತು ಹಂಪಿ ಅಭಿವೃದ್ಧಿ ಪ್ರಾಧಿಕಾರ ಪ್ರವಾಸಿಗರ ಜೀವ ಉಳಿಸುವ ಕ್ರಮಕೈಗೊಳ್ಳದೇ ಮೌನವಹಿಸಿದ್ದು ಕೂಡಲೇ ಪ್ರವಾಸಿಗರ ಜೀವನ ಸಂರಕ್ಷಣೆಗೆ ಮುಂದಾಗಬೇಕಿದೆ. ಪ್ರತಿ ಎರಡ್ಮೂರು ತಿಂಗಳಿಗೊಮ್ಮೆ ಇಲ್ಲಿಗೆ ಈಜಾಡಲು ಬರುವ ದೇಶ ವಿದೇಶಿ ಪ್ರವಾಸಿಗರು ಕೆರೆಯ ನೀರಿನ ಆಳ ಅರಿಯದೇ ಜೀವ ಕಳೆದುಕೊಳ್ಳುತ್ತಿರುವುದು ಕಂಡು ಬರುತ್ತಿದೆ.

Advertisement

ಸಾಣಾಪೂರ ಹತ್ತಿರದ ಕಿಷ್ಕಿಂದಾ ಏಳುಗುಡ್ಡ ಪ್ರದೇಶದಲ್ಲಿ ಹರಿಯುವ ತುಂಗಭದ್ರಾ ಎಡದಂಡೆ ಕಾಲುವೆ ನೀರು ಇಕ್ಕಟಾದ ಸ್ಥಳದಲ್ಲಿ ಹೋಗುವಾಗ ನೈಸರ್ಗಿಕವಾಗಿ ಕೆರೆ ನಿಮಾರ್ಣವಾಗುತ್ತಿದ್ದು ಎರಡು ಕಡೆ  ಬೃಹತ್ ಪ್ರಮಾಣದ ನೀರು ನಿಂತಿರುವುದರಿಂದ  ಎರಡು ಕೆರೆಗಳು ನಿರ್ಮಾಣವಾಗಿವೆ. ಸುತ್ತಲೂ ಗುಡ್ಡ ಕಲ್ಲುಬಂಡೆ ಇರುವುದರಿಂದ ಪ್ರವಾಸಿ ತಾಣವಾಗಿ ಕಳೆದ ಎರಡು ದಶಕಗಳಿಂದ ಆಕರ್ಷಿಣೀಯ ಸ್ಥಳವಾಗಿದೆ. ವಿರೂಪಾಪೂರಗಡ್ಡಿಯಲ್ಲಿ ರೆಸಾರ್ಟ್ ಗಳು ಇದ್ದ ಸಂದರ್ಭದಲ್ಲಿ ವಿದೇಶ ಪ್ರವಾಸಿಗರು ಹಾಗೂ ದೇಶಿಯ ಐಟಿಬಿಟಿ ಉದ್ಯೋಗಿಗಳು ವೀಕ್ ಎಂಡ್ ನೆಪದಲ್ಲಿ ಇಲ್ಲಿಗೆ ಆಗಮಿಸಿ ಇಲ್ಲಿ  ತಂಗಿ ನಿತ್ಯವೂ ಸಾಣಾಪೂರ ಕೆರೆಯಲ್ಲಿ ಈಜಾಡಲು ಮತ್ತು ಬೋಟಿಂಗ್(ತೆಪ್ಪ) ಮಾಡುತ್ತಿದ್ದರು. ಪ್ರವಾಸಿಗರನ್ನು ಸ್ಥಳೀಯ  ಯುವಕರು ಕೆರೆಯಲ್ಲಿ ಬೋಟಿಂಗ್ (ತೆಪ್ಪ ಅಥವಾ ಹರಿಗೋಲಿನಲ್ಲಿ) ಮಾಡಿಸುತ್ತಿದ್ದರು. ಬೋಟಿಂಗ್ ಮಾಡಿದ ಪೊಟೋ ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದರಿಂದ ಸಾಣಾಪೂರ ಲೇಕ್ ಬೋಟಿಂಗಿಗೆ ಆಗಮಿಸುವವರ ಸಂಖ್ಯೆ ಹೆಚ್ಚಾಗಿದೆ. ಕಿಷ್ಕಿಂದಾಕ್ಕೆ ಬರುವ ಪ್ರವಾಸಿಗರು ಕೆರೆಯ ಬದಿ ಕಲ್ಲು ಬಂಡೆಗಳ ಮೇಲಿಂದ ನೀರಿಗೆ ಧುಮಿಕಿ ಸಂತೋಷಪಡುತ್ತಿದ್ದರು. ಧುಮುಕುವುದನ್ನು ಪ್ರವಾಸಿಗರಿಗೆ ಕಲಿಸಲು ಮತ್ತು ಬೋಟಿಂಗ್ ನಲ್ಲಿ ಸುತ್ತಾಡಿಸಲು ಸ್ಥಳೀಯ ಕೆಲ ಯುವಕರು ಸಾವಿರಾರು ರೂ.ಗಳನ್ನು ಪಡೆಯುತ್ತಾರೆ. ಸರಿಯಾಗಿ ಈಜಲು ಬಾರದ ಪ್ರವಾಸಿಗರು ಕಲ್ಲಿನ ಮೇಲಿಂದ ಧುಮುಕಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಇತ್ತೀಚೆಗೆ ಕೆರೆಯಲ್ಲಿ ಬೋಟಿಂಗ್ ಮತ್ತು ನೀರಿನಲ್ಲಿ ಜಂಪಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿದ್ದು ನೀರಿನ ಆಳ ಗೊತ್ತಿಲ್ಲದ ಹಲವು ಪ್ರವಾಸಿಗರು ನೀರಿನಲ್ಲಿ ಮುಳುಗಿ ಸಾವನ್ನಪ್ಪುತ್ತಿದ್ದಾರೆ.

ಜಿಲ್ಲಾಡಳಿತ ಈ ಪ್ರದೇಶವನ್ನು ನಿರ್ವಾಹಣೆ ಮಾಡುವ ಹಂಪಿ ಅಭಿವೃದ್ಧಿ ಪ್ರಾಧಿಕಾರ ಸಾಣಾಪೂರ ಕೆರೆಯ ಸುತ್ತಲೂ ಪ್ರವಾಸಿಗರು ಹೋಗದಂತೆ ಸೂಕ್ತ ಸಿಬ್ಬಂದಿ ನಿಯೋಜನೆ ಮಾಡಬೇಕು. ಇಲ್ಲವೇ ಈಜಾಡಲು ಮತ್ತು ಬೋಟಿಂಗ್ ಮಾಡದಂತೆ ಕಠಿಣ ಕಾನೂನು ಕ್ರಮಕೈಗೊಳ್ಳಬೇಕಿದೆ. ಕೆರೆಯ ಸುತ್ತ ಆಳೆತ್ತರದ ಕಬ್ಬಿಣದ ತಡೆಗೋಡೆ ನಿರ್ಮಿಸಬೇಕು. ಇಲ್ಲವೇ ಪ್ರವಾಸೋದ್ಯಮ ಇಲಾಖೆಯಿಂದ ಬೋಟಿಂಗ್ ಮತ್ತು ಈಜಾಡಲು ತರಬೇತಿ ವ್ಯವಸ್ಥೆ ಮಾಡಬೇಕು. ಇಲ್ಲದಿದ್ದರೆ ಪ್ರವಾಸಕ್ಕೆ ಆಗಮಿಸಿದ ಮತ್ತು ಹೋಳಿ, ನೂತನ ವರ್ಷ, ಸಂಕ್ರಾಂತಿ  ಹಬ್ಬದ ಸಂದರ್ಭದಲ್ಲಿ ಇಲ್ಲಿಗೆ ಬರುವ ಪ್ರವಾಸಿಗರು ಪ್ರಾಣ ಕಳೆದುಕೊಳ್ಳುವುದು ಇನ್ನೂ ಹೆಚ್ಚಾಗಬಹುದಾಗಿದೆ.

ಅಕ್ರಮ ಬೋಟಿಂಗ್ ನಿಲ್ಲಿಸಲಿ: ಸಾಣಾಪೂರ ಕೆರೆ ಅತ್ಯಂತ ಅಪಾಯಕಾರಿಯಾಗಿದೆ ಇಲ್ಲಿ ಸದ್ಯ ಬೋಟಿಂಗ್(ತೆಪ್ಪಗಳಲ್ಲಿ) ನಿಷೇಧವಿದ್ದರೂ ಜೀವ ಸಂರಕ್ಷಕ ಸಲಕರಣೆ ಇಲ್ಲದೇ ಸ್ಥಳೀಯ ಕೆಲವರು ಅಕ್ರಮವಾಗಿ ಬೋಟಿಂಗ್ ನಡೆಸುತ್ತಿದ್ದಾರೆ. ಕೆರೆಯಲ್ಲಿ ಮೇಲಿಂದ ಜಂಪಿಂಗ್  ಮಾಡುವ ದೃಶ್ಯ ಮೊಬೈಲ್‌ಗಳಲ್ಲಿ ಸೆರೆ ಹಿಡಿಯಲು ಮೇಲಿಂದ ಜಂಪಿಂಗ್ ಮಾಡಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದರಲ್ಲಿ ಬಹುತೇಕ ಯುವಕರಾಗಿದ್ದು ಅವರ ಕುಟುಂಬ ಇಡೀ ಜೀವನ ಪರ್ಯಾಂತ ಪರಿತಪಿಸುವಂತಾಗಿದೆ. ಕೂಡಲೇ ಸರಕಾರ ಸಾಣಾಪೂರ ಕೆರೆಯಲ್ಲಿ ಸುರಕ್ಷತಾ ಕ್ರಮಕೈಗೊಳ್ಳಬೇಕು. ಸ್ಥಳೀಯರ ಬೋಟಿಂಗ್ ನಿಷೇಧ ಮಾಡಿದ್ದರೂ ಅರಿಗೋಲಿನಲ್ಲಿ ಪ್ರವಾಸಿಗರನ್ನು ಕೆರೆಯಲ್ಲಿ ಈಜಾಡುವವರ ವಿರುದ್ಧ  ಸ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲಿ ಈಜಾಡಲು ಅವಕಾಶ ನೀಡಬಾರದೆಂದು  ಸ್ಥಳೀಯರಾದ  ಮಹೇಶ ಸಾಗರ ಒತ್ತಾಯಿಸಿದ್ದಾರೆ .

Advertisement

ಕಠಿಣ ಕ್ರಮ: ಸಾಣಾಪೂರ ಕೆರೆಯಲ್ಲಿ ಬೋಟಿಂಗ್ ನಿಷೇಧ ಮಾಡಿ ಹಲವು ಸಲ ಅರಿಗೋಲುಗಳನ್ನು ಸೀಜ್ ಮಾಡಲಾಗಿದೆ. ಸ್ಥಳೀಯರು ರಾಜಕಾರಣಿಗಳ ಪ್ರಭಾವ ಬಳಸಿ ಅರಿಗೋಲು ತೆಗೆದುಕೊಂಡು ಹೋಗಿ ಪುನಹ ಕೆರೆಯಲ್ಲಿ ಅರಿಗೋಲು ಹಾಕುತ್ತಿದ್ದಾರೆ. ಇಲ್ಲಿ ಈಜಾಡಲು ನಿಷೇಧ ಅಪಾಯಕಾರಿ ಎಂದು ಹಲವು ಕಡೆ  ಬರೆಸಿದ್ದರೂ ಇಲ್ಲಿಗೆ ಬರುವ ಪ್ರವಾಸಿಗರು ಕಲ್ಲುಗಳ ಮೇಲಿಂದ ಜಂಪಿಂಗ್ಗ್  ಮಾಡಿ ಪ್ರಾಣ ಕಳೆದುಕೊಳ್ಳುತ್ತಿದ್ದು ಅರಿಗೋಲು ಹಾಕುವವರ ವಿರುದ್ಧ ಇನ್ನೂ ನಿರ್ದಕ್ಷಿಣ್ಯ ಕ್ರಮ ಜರುಗಿಸಲಾಗುತ್ತದೆ ಎಂದು ಸಾಣಾಪುರ ಗ್ರಾಪಂ ಪಿಡಿಒ ಬಬಸವರಾಜಗೌಡ ನಾಯಕ ಉದಯವಾಣಿ ಗೆ ತಿಳಿಸಿದ್ದಾರೆ.

-ಕೆ.ನಿಂಗಜ್ಜ

Advertisement

Udayavani is now on Telegram. Click here to join our channel and stay updated with the latest news.

Next