Advertisement

Gangolli: ಕಳ್ಳತನ ಆರೋಪಿಗಳ ಬಂಧನ

08:57 PM Sep 03, 2024 | Team Udayavani |

ಗಂಗೊಳ್ಳಿ: ಮರವಂತೆ ಅಂಚೆ ಕಚೇರಿ ಕಳ್ಳತನದಲ್ಲಿ ಭಾಗಿಯಾದ ಆರೋಪಿಗಳನ್ನು ಸೆ.3ರ ಮಂಗಳವಾರ ಪೊಲೀಸರು ಬಂಧಿಸಿದ್ದಾರೆ.

Advertisement

ಸಿ.ಸಿ ಕ್ಯಾಮರಾದ ಪೂಟೇಜ್‌ ನ ಆಧಾರದ ಮೇಲೆ ಆರೋಪಿಯ ಪತ್ತೆ ಕಾರ್ಯಾಚರಣೆ ನಡಸಿ ಉ. ಕ. ಜಿಲ್ಲೆಯ ಭಟ್ಕಳ ಜಾಲಿ ರಸ್ತೆ ಕ್ರಾಸ್‌ ಎಂಬಲ್ಲಿ ಆರೋಪಿ ಪೌಜಾನ್‌ ಅಹಮ್ಮದ್‌ (19 ) ಹಾಗೂ ಇನ್ನೊರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ವಶಕ್ಕೆ ಪಡೆದು ವಿಚಾರಿಸಿದ್ದಾರೆ.

ಆಗ ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡಿದ್ದು, ಕೃತ್ಯಕ್ಕೆ ಬಳಸಿದ ಬೈಕನ್ನು ಸ್ವಾಧೀನ ಪಡಿಸಿಕೊಂಡು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಗಂಗೊಳ್ಳಿ ಪೊಲೀಸ್‌ ಠಾಣಾ ಎಸ್‌ ಐಗಳಾದ ಹರೀಶ್‌, ಬಸವರಾಜ ಕನಶೆಟ್ಟಿ, ಸಿಬ್ಬಂದಿಗಳಾದ ಸಂದೀಪ ಕುರಾಣಿ, ರಾಜು ನಾಯ್ಕ, ನಾಗರಾಜ ಹಾಗೂ ದಿನೇಶ್‌ ರವರ ತಂಡ ಕಾರ್ಯಾಚರಣೆ ನಡೆಸಿದೆ.

Advertisement

Udayavani is now on Telegram. Click here to join our channel and stay updated with the latest news.

Next