Advertisement

Cogress ಸ್ಟಾರ್‌ ಪ್ರಚಾರಕರ ಪಟ್ಟಿಯಲ್ಲಿ ಗ್ಯಾಂಗ್‌ಸ್ಟರ್‌ ಅತೀಕ್‌ ಬೆಂಬಲಿಗ-ಶೋಭಾ ವಾಗ್ದಾಳಿ

09:30 PM Apr 20, 2023 | Team Udayavani |

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಹಿಂದೂ ವಿರೋಧಿ ಮತ್ತು ಮುಸಲ್ಮಾನರ ನಾಯಕ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಕ್ರಿಮಿನಲ್‌ಗ‌ಳು ಹಾಗೂ ರಸ್ತೆಯಲ್ಲಿ ಗೋಹತ್ಯೆ ಮಾಡುವವರ ನೇತಾರ. ತನ್ನ ಸ್ಟಾರ್‌ ಪ್ರಚಾರಕರ ಪಟ್ಟಿಯಲ್ಲಿ ಗ್ಯಾಂಗ್‌ಸ್ಟರ್‌ ಅತೀಕ್‌ ಅಹ್ಮದ್‌ ಬೆಂಬಲಿಗನಿಗೆ ಕಾಂಗ್ರೆಸ್‌ ಅವಕಾಶ ನೀಡಿದೆ ಎಂದು ಕೇಂದ್ರ ಸಚಿವೆ, ಬಿಜೆಪಿ ರಾಜ್ಯ ಚುನಾವಣ ಸಮಿತಿ ಸಂಚಾಲಕಿ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.3

Advertisement

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್‌ನ ಇಬ್ಬರು ಹಿರಿಯ ನಾಯಕರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್‌ನ ಸ್ಟಾರ್‌ ಪ್ರಚಾರಕರ ಪಟ್ಟಿಯಲ್ಲಿ ಇಮ್ರಾನ್‌ ಪ್ರತಾಪ್‌ ಗಹ್ರಿ ಹೆಸರಿದೆ. ಈತ ಇತ್ತೀಚೆಗಷ್ಟೇ ಹತ್ಯೆಯಾಗಿರುವ ಉತ್ತರ ಪ್ರದೇಶದ ಭೂಗತ ಪಾತಕಿ ಅತೀಕ್‌ ಅಹ್ಮದ್‌ ಸಹಚರ. ಈತ ಅತೀಕ್‌ ಅಹ್ಮದ್‌ನನ್ನು ತನ್ನ ಗುರು ಎಂದು ಕರೆಯುತ್ತಿದ್ದ. ಇಂಥವರಿಗೆ ತನ್ನ ಸ್ಟಾರ್‌ ಪ್ರಚಾರಕರ ಪಟ್ಟಿಯಲ್ಲಿ ಕಾಂಗ್ರೆಸ್‌ ಅವಕಾಶ ನೀಡಿದೆ ಎಂದು ಆರೋಪಿಸಿದರು.
ಕಾಂಗ್ರೆಸ್‌ ಕೈಗೆ ರಕ್ತ ಅಂಟಿದೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಅಪರಾಧಿಗಳ ಜತೆ ಕೈ ಜೋಡಿಸಿದ್ದಾರೆ. ಮಂಗಳೂರು ಕುಕ್ಕರ್‌ ಸ್ಫೋಟ ಪ್ರಕರಣದ ಆರೋಪಿ ನನ್ನ ಸಹೋದರ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ದೇಶದ್ರೋಹಿಗಳನ್ನು ರಕ್ಷಿಸುವ ಕೆಲಸವನ್ನು ಸಿದ್ದರಾಮಯ್ಯ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮತಾಂತರ ನಿಯಂತ್ರಣ ಕಾಯ್ದೆ ಹಾಗೂ ಗೋಹತ್ಯೆ ನಿಷೇಧ ಕಾಯ್ದೆಯನ್ನು ರದ್ದುಪಡಿಸುವುದಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಘೋಷಿಸಿದ್ದಾರೆ. ಕೇರಳದ ಕಣ್ಣೂರಿನಲ್ಲಿ ನಡು ರಸ್ತೆಯಲ್ಲಿ ಗೋವುಗಳನ್ನು ಹತ್ಯೆ ಮಾಡಿದ್ದ ಕಾಂಗ್ರೆಸ್‌ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ರಿಜಿನ್‌ ಚಂದ್ರನ್‌, ಬಳಿಕ ಗೋವಿನ ರಕ್ತದ ಜತೆ ಚೆಲ್ಲಾಟವಾಡಿದ್ದ. ಇಂಥವನ ಜತೆಗೆ ಡಿ.ಕೆ.ಶಿವಕುಮಾರ್‌ ಓಡಾಡುತ್ತಾರೆ. ರಾಹುಲ್‌ ಗಾಂಧಿ ಕೂಡ ಈ ಪಾತಕಿಯ ಜತೆಗೆ ಹೆಜ್ಜೆ ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next