Advertisement

ಗಂಗೂಬಾಯಿ ಆರ್.ಮಾನಕರ್ ಉತ್ತರ ಕನ್ನಡ ಜಿಲ್ಲಾ ನೂತನ ಜಿಲ್ಲಾಧಿಕಾರಿ

10:02 PM Jul 25, 2023 | Team Udayavani |

ಕಾರವಾರ: ಗಂಗೂಬಾಯಿ ಆರ್.ಮಾನಕರ್ ಉತ್ತರ ಕನ್ನಡ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಆಗಮಿಸಲಿದ್ದಾರೆ‌.

Advertisement

ಸರ್ಕಾರ ಅವರನ್ನು ಉತ್ತರ ಕನ್ನಡ ಜಿಲ್ಲಾಧಿಕಾರಿಯಾಗಿ ವರ್ಗಾಯಿಸಿದೆ. ಗಂಗೂಬಾಯಿ 2012ನೇ ಸಾಲಿನ ಐಎಎಸ್ ಅಧಿಕಾರಿ. ಸದ್ಯ ಅವರು ಮಾಹಿತಿ ಆಯೋಗದ ಕಾರ್ಯದರ್ಶಿಯಾಗಿ ಬೆಂಗಳೂರಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ಅವರು ಕುಮಟಾ ತಾಲೂಕಿನ ಸಹಾಯಕ ಕಮಿಷನರ್ ಆಗಿ ಹಿಂದೆ ಕಾರ್ಯನಿರ್ವಹಿಸಿದ್ದರು.ಅತ್ಯಂತ ಪ್ರಾಮಾಣಿಕ ಅಧಿಕಾರಿ ‌ಎಂಬ ಹೆಗ್ಗಳಿಕೆ ಅವರಿಗಿದೆ.‌

Advertisement

Udayavani is now on Telegram. Click here to join our channel and stay updated with the latest news.

Next