Advertisement

ಪಂತ್ – ರಾಹುಲ್ ವಿಕೆಟ್ ಕೀಪಿಂಗ್ ಸಮಸ್ಯೆ ಬಗ್ಗೆ ಕೊನೆಗೂ ಮೌನ ಮುರಿದ ಗಂಗೂಲಿ

09:58 AM Jan 26, 2020 | keerthan |

ಮುಂಬೈ: ಸದ್ಯ ಕಿವೀಸ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಮೊದಲ ಟಿ20 ಪಂದ್ಯವನ್ನು ಗೆದ್ದು ಶುಭಾರಂಭ ಮಾಡಿದೆ. ಈ ನಡುವೆ ಹೊಸದಾಗಿ ಆರಂಭವಾಗಿರುವ ವಿಕೆಟ್ ಕೀಪರ್ ಸಮಸ್ಯೆ ಬಗ್ಗೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮಾತನಾಡಿದ್ದಾರೆ.

Advertisement

ವಿರಾಟ್ ಕೊಹ್ಲಿ ನಿರ್ಧಾರ ಕೈಗೊಂಡಿದ್ದಾರೆ. ತಂಡದಲ್ಲಿ ಕೆ ಎಲ್ ರಾಹುಲ್ ಪಾತ್ರದ ಬಗ್ಗೆ ಟೀಂ ಮ್ಯಾನೇಜ್ ಮೆಂಟ್ ಮತ್ತು ತಂಡದ ನಾಯಕ ವಿರಾಟ್ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಗಂಗೂಲಿ ಹೇಳಿದ್ದಾರೆ.

ಆಸೀಸ್ ಸರಣಿಯಲ್ಲಿ ಪಂತ್ ಗಾಯಗೊಂಡ ಕಾರಣ ಕೆ ಎಲ್ ರಾಹುಲ್ ಅನಿವಾರ್ಯವಾಗಿ ವಿಕೆಟ್ ಕೀಪಿಂಗ್ ಜವಾಬ್ದಾರಿ ನಿಭಾಯಿಸಿದ್ದರು. ರಾಹುಲ್ ವಿಕೆಟ್ ಕೀಪಿಂಗ್ ಮಾಡುವುದರಿಂದ ತಂಡದ ಸಮತೋಲನ ಸಾಧ್ಯ ಎಂದು ವಿರಾಟ್ ಕಿವೀಸ್ ಸರಣಿಯಲ್ಲೂ ಅದನ್ನೇ ಮುಂದುವರಿಸಿದ್ದಾರೆ.

ಕೆ ಎಲ್ ರಾಹುಲ್ ಅವರ ಬ್ಯಾಟಿಂಗ್ ಪ್ರದರ್ಶನವನ್ನು ಹೊಗಳಿರುವ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ನಿಗದಿತ ಓವರ್ ಕ್ರಿಕೆಟ್ ನಲ್ಲಿ ರಾಹುಲ್ ಅದ್ಭುತ ಫಾರ್ಮಿನಲ್ಲಿದ್ದಾರೆ. ಟೆಸ್ಟ್ ಕ್ರಿಕೆಟ್ ನಲ್ಲೂ ರಾಹುಲ್ ಇದೇ ಬ್ಯಾಟಿಂಗ್ ಪ್ರದರ್ಶನ ನೀಡಿ ತಂಡಕ್ಕೆ ವಾಪಾಸಾಗಬೇಕು ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next