Advertisement
ಮೂಲತಃ ಕೇರಳದ ಕೊಲ್ಲಂ ಜಿಲ್ಲೆಯ ಕರಿಪ್ರ ಗ್ರಾಮದ, ಪ್ರಸ್ತುತ ಮಂಗಳೂರಿನ ಕದ್ರಿಯಲ್ಲಿರುವ ಅಕ್ಷಯ್ ಕೆ. ಪ್ರಸಾದ್ (22), ಕೇರಳದ ಕಣ್ಣೂರು ಮೂಲದ ನಿವಾಸಿಗಳಾದ ನಿಮಿಲ್ (21), ಅಮಿತ್ ಶ್ರೀವತ್ಸನ್ (21), ಅಶ್ವಿನ್(21), ಮಹಮ್ಮದ್ ಆಮಿರ್ (22), ಆಕಾಶ್ ಎಸ್. ನಾಯರ್ (23), ಅಕ್ಷಯ್ (22) ಹಾಗೂ ಮಂಗಳೂರು ನಗರದ ಹೊರವಲಯ ಕಣ್ಣೂರು ಬೋರುಗುಡ್ಡೆ ನಿವಾಸಿ ಜಾಫರ್ (22) ಬಂಧಿತರು. ನಗರದ ಮೋರ್ಗನ್ಸ್ಗೆàಟ್ ಬಳಿಯ ಮೈದಾನಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದಾರೆಂಬ ಮಾಹಿತಿ ಆಧಾರದಲ್ಲಿ ಪೊಲೀಸರು ದಾಳಿ ನಡೆಸಿದ್ದರು.
ಬಂಧಿತರು ಕೇರಳದಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ. ಆರೋಪಿಗಳ ಪೈಕಿ 7 ಮಂದಿ ಮಂಗಳೂರಿನ ಎರಡು ಎಂಜಿನಿಯರಿಂಗ್ ಕಾಲೇಜಿನ ಹಾಗೂ ಒಂದು ಫಿಸಿಯೋಥೆರಪಿ ಕಾಲೇಜಿನ ವಿದ್ಯಾರ್ಥಿಗಳಾಗಿರುತ್ತಾರೆ ಎಂಬ ಮಾಹಿತಿ ಲಭ್ಯವಾಗಿದೆ.