Advertisement

ಸಾಗರ: ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿ ಬಂಧನ

04:44 PM Jul 23, 2022 | Team Udayavani |

ಸಾಗರ: ಇಲ್ಲಿನ ಹೊಸನಗರ ರಸ್ತೆಯಲ್ಲಿ ಬೈಕ್‌ನಲ್ಲಿ ಗಾಂಜಾ ಸಾಗಿಸುತ್ತಿದ್ದ ನಾಸಿರ್ ಎಂಬಾತನನ್ನು ಅಬಕಾರಿ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ.

Advertisement

ಆರೋಪಿ ಬಳಿ ಇದ್ದ 60 ಗ್ರಾಂ ಒಣ ಗಾಂಜಾವನ್ನು ಬೈಕ್ ಸಮೇತ ವಶಪಡಿಸಿಕೊಳ್ಳಲಾಗಿದೆ. ಅಬ್ಕಾರಿ ಅಧಿಕಾರಿಗಳು ಆರೋಪಿಯನ್ನು ಬಂಧಿಸಿ ,ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ಅಬಕಾರಿ ನಿರೀಕ್ಷಕ ಸಂದೀಪ್ ಎಲ್.ಸಿ., ಉಪ ನಿರೀಕ್ಷಕ ಸಂತೋಷ್, ವಿನ್ನಿ ಎಚ್.ಲೋಬೋ, ಸಿಬ್ಬಂದಿ ಗುರುಮೂರ್ತಿ, ಮುದಾಸಿರ್, ದೀಪಕ್ ಯು.ಪಿ., ಅರುಣ್ ಜಿ. ಮಡಿವಾಳ, ಕನ್ನಯ್ಯ, ಗಣಪತಿ ಗುಡ್ಡೇಮನೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next