Advertisement

Sullia ಗಾಂಜಾ ಸಾಗಾಟ ಪ್ರಕರಣ : ಶಿಕ್ಷೆ ಪ್ರಕಟ

12:59 AM Jul 12, 2024 | Team Udayavani |

ಸುಳ್ಯ: ಗಾಂಜಾ ಸಾಗಾಟದ ಪ್ರಕರಣದ ವಿಚಾರಣೆ ನಡೆಸಿ, ನ್ಯಾಯಾಲಯದಲ್ಲಿ ಆರೋಪ ಸಾಬೀತಾಗಿದ್ದು, ಇಬ್ಬರಿಗೆ ಸುಳ್ಯ ನ್ಯಾಯಾಲಯ ಶಿಕ್ಷೆ ವಿಧಿಸಿದೆ.

Advertisement

2018ರ ಮಾರ್ಚ್‌ 28ರಂದು ಸುಳ್ಯ ಗಾಂಧಿನಗರ ಶಾಲಾ ಕ್ರಾಸ್‌ ಬಳಿ ಮೋಟಾರು ಸೈಕಲ್‌ನಲ್ಲಿ ಗಾಂಜಾ ಸಾಗಿಸುತ್ತಿದ್ದುದನ್ನು ಪೊಲೀಸರು ಪತ್ತೆ ಹಚ್ಚಿ ಪಿ.ಎಂ. ಮೊಯಿದ್ದೀನ್‌ ಮತ್ತು ಮುರಳಿ ಸಿ. ಅವರನ್ನು ಬಂಧಿಸಿದ್ದರು. ಇವರಿಬ್ಬರ ಮೇಲಿನ ಆರೋಪ ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಅವರಿಗೆ ಎನ್‌.ಡಿ.ಪಿ.ಎಸ್‌. ಕಾಯ್ದೆಯ ಅಡಿಯಲ್ಲಿ ತಲಾ ರೂ.10,000 ದಂಡ ವಿಧಿಸಲಾಗಿದೆ.

ದಂಡ ತೆರಲು ತಪ್ಪಿದ್ದಲ್ಲಿ 4 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿ ಹಿರಿಯ ಸಿವಿಲ್‌ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್‌.ಸಿ.ಬಿ ಮೋಹನ್‌ ಬಾಬು ಅವರು ಆದೇಶ ಮಾಡಿರುತ್ತಾರೆ. ಈ ಪ್ರಕರಣವನ್ನು ಸರಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕರು ವಾದ ಮಂಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next