Advertisement

ರೈಲಿನಲ್ಲಿ ಗಾಂಜಾ ಸಾಗಣೆ: ಮಾರಾಟಗಾರನ ಬಂಧನ

05:44 AM Feb 28, 2019 | Team Udayavani |

ಬೆಂಗಳೂರು: ರೈಲಿನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಕೇರಳ ಮೂಲದ ಆರೋಪಿಯನ್ನು ಬೈಯಪ್ಪನಹಳ್ಳಿ ರೈಲ್ವೆ ಪೊಲೀಸರು ಬಂಧಿಸಿದ್ದಾರೆ.ಕೇರಳದ ಕಾಸರಗೊಡು ಜಿಲ್ಲೆಯ ಇಕ್ಬಾಲ್‌ ಅಲಿಯಾಸ್‌ ಇಕ್ಕು (22) ಬಂಧಿತ. ಆತನಿಂದ 10 ಲಕ್ಷ ರೂ. ಮೌಲ್ಯದ 20 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ.ಆರೇಳು ವರ್ಷಗಳಿಂದ ಮಾದಕ ವಸ್ತು ಮಾರಾಟ ದಂಧೆಯಲ್ಲಿ ತೊಡಗಿರುವ ಇಕ್ಬಾಲ್‌, ಆಂಧ್ರ ಪ್ರದೇಶದ ಮಧ್ಯವರ್ತಿಯೊಬ್ಬನಿಂದ ಗಾಂಜಾ ಖರೀದಿಸುತ್ತಿದ್ದ.

Advertisement

ನಂತರ ಬಾಣಸವಾಡಿಯ ರೈಲು ನಿಲ್ದಾಣದಿಂದ ಕಣ್ಣೂರು ಎಕ್ಸ್‌ಪ್ರೆಸ್‌ ರೈಲು ಮೂಲಕ ಕೇರಳಕ್ಕೆ ಕೊಂಡೊಯ್ಯುತ್ತಿದ್ದ. ಅನಂತರ ಸಣ್ಣ-ಸಣ್ಣ ಪ್ಯಾಕೆಟ್‌ಗಳನ್ನಾಗಿ ಮಾಡಿ ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಎಂದು ರೈಲ್ವೆ ಪೊಲೀಸರು ಹೇಳಿದರು.ಇತ್ತೀಚೆಗೆ ಕಣ್ಣೂರು ಎಕ್ಸ್‌ಪ್ರೆಸ್‌ ರೈಲು ಮೂಲಕ ಕೇರಳಕ್ಕೆ ಗಾಂಜಾ ಸಾಗಿಸುತ್ತಿರುವ ಬಗ್ಗೆ ದೊರೆತ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ರೈಲ್ವೆ ಪೊಲೀಸರು ಹೇಳಿದರು. 

Advertisement

Udayavani is now on Telegram. Click here to join our channel and stay updated with the latest news.

Next