Advertisement

ಗಣಪತಿ ಮೆರವಣಿಗೆಯ ಟ್ರ್ಯಾಕ್ಟರ್ ಗೆ ಕಾರು ಢಿಕ್ಕಿ; ಮಹಿಳೆ ಸಾವು, ಓರ್ವ ಗಂಭೀರ

09:01 PM Sep 04, 2022 | Team Udayavani |

ಮಧುಗಿರಿ: ತಾಲೂಕಿನ ಹೊಸಕೆರೆ ಕೆರೆಗೆ ಗಣಪತಿ ಬಿಡಲು ಮೆರವಣಿಗೆ ಹೋಗುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಗಣಪತಿ ಮೆರವಣಿಗೆ ಹೋಗುತ್ತಿದ್ದಟ್ರ್ಯಾಕ್ಟರ್ ಗೆ ಹಿಂದಿನಿಂದ ಢಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Advertisement

ಅಪಘಾತವಾದ ರಭಸಕ್ಕೆ ಕಾರಿನಲ್ಲಿದ್ದ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು ಒರ್ವ ಪುರುಷ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ಮಹಿಳೆ ಉಮಾದೇವಿ (27) ಎಂದು ತಿಳಿದು ಬಂದಿದೆ. ಗಾಯಗೊಂಡವರು ತಿಪ್ಪೆಸ್ವಾಮಿ (36) ಇವರಿಗೆ ಮಧುಗಿರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಕಾರಿನಲ್ಲಿದ್ದವರು ಮಡಕಶಿರಾ ತಾಲೂಕಿನ ಜಂಬಲಬಂಡೆ ಗ್ರಾಮದವರೆಂದು ತಿಳಿದುಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next