Advertisement

Sandalwood; ರಿಲಯನ್ಸ್ ತೆಕ್ಕೆಗೆ ಯೋಗರಾಜ್ ಭಟ್ರ ‘ಗರಡಿ’

12:36 PM Sep 25, 2023 | Team Udayavani |

ಯೋಗರಾಜ್‌ ಭಟ್‌ ನಿರ್ದೇಶನದ “ಗರಡಿ’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ನವೆಂಬರ್‌ 10 ರಂದು ಚಿತ್ರ ವರ್ಲ್ಡ್ವೈಡ್‌ ಸಿನಿಮಾ ಬಿಡುಗಡೆಯಾಗುತ್ತಿದೆ. ಈಗಾಗಲೇ ಚಿತ್ರತಂಡ ಅಧಿಕೃತವಾಗಿ ಬಿಡುಗಡೆ ದಿನಾಂಕ ಘೋಷಿಸಿದೆ. “ಗರಡಿ’ ಈ ಬಾರಿ ದೊಡ್ಡ ಮಟ್ಟದಲ್ಲಿ ಬಿಡುಗಡೆಯಾಗಲಿದೆ. ಅದಕ್ಕೆ ಕಾರಣ ರಿಲಯನ್ಸ್‌ ಎಂಟರ್‌ಟೈ ನ್ಮೆಂಟ್‌.

Advertisement

ಹೌದು, ಬಿ.ಸಿ.ಪಾಟೀಲ್‌ ಅವರ ಕೌರವ ಪ್ರೊಡಕ್ಷನ್ಸ್‌ಗೆ ರಿಲಯನ್ಸ್‌ ಕೈ ಜೋಡಿಸಿದ್ದು, ಸಿನಿಮಾದ ವಿತರಣಾ ಹಕ್ಕನ್ನು ಪಡೆದಿದೆ. ಈ ಮೂಲಕ ಚಿತ್ರ ದೊಡ್ಡ ಮಟ್ಟದಲ್ಲಿ ಬಿಡುಗಡೆಯಾಗಲಿದೆ.

ಈಗಾಗಲೇ ಚಿತ್ರದ ಹಾಡೊಂದು ಬಿಡುಗಡೆಯಾಗಿದೆ. ಉತ್ತರ ಕರ್ನಾಟಕ ಶೈಲಿಯಲ್ಲಿರುವ “ಹೊಡಿರಲೆ ಹಲಗಿ’ ಎಂಬ ಈ ಹಾಡಿನಲ್ಲಿ ನಿಶ್ವಿ‌ಕಾ ನಾಯ್ಡು ಸ್ಟೆಪ್‌ ಹಾಕಿದ್ದು, ಸಖತ್‌ ಹಾಟ್‌ ಆಗಿ ಕಾಣಿಸಿಕೊಂಡಿದ್ದಾರೆ. ಇದರೊಂದಿಗೆ ವರ್ಷದ ಹಿಟ್‌ ಸಾಂಗ್‌ ಲಿಸ್ಟ್‌ನಲ್ಲಿ ಸೇರಿಕೊಂಡಿದೆ. ಇಂದು ಚಿತ್ರದ ಟೈಟಲ್‌ ಟ್ರ್ಯಾಕ್‌ ರಿಲೀಸ್‌ ಆಗುತ್ತಿದೆ.

ಇದನ್ನೂ ಓದಿ:Janata Darshan: ಅಧಿಕಾರಿಗಳು ಜನರ ಸಮಸ್ಯೆಗಳನ್ನು ತಾಳ್ಮೆಯಿಂದ ಆಲಿಸಬೇಕು: ಹೆಬ್ಬಾಳ್ಕರ್

ಚಿತ್ರದ ಬಗ್ಗೆ ಮಾತನಾಡಯವ ಯೋಗರಾಜ್‌ ಭಟ್‌, “ನಾನು ಬರೆದ ಕಥೆಯಲ್ಲಿ ನನಗೆ ತುಂಬಾ ಇಷ್ಟವಾದ ಕಥೆ. ಗರಡಿ ಮನೆಯಲ್ಲಿ ಅಡುಗೆ ಮಾಡಿಕೊಂಡಿದ್ದ ಯುವಕನೊಬ್ಬನ ಕಥೆ. ಏಕಲವ್ಯನಂತಹ ಯುವಕನ ಕಥೆ ಎನ್ನಬಹುದು. ಗರಡಿ ಮನೆಯಿಂದ ಆತನನ್ನು ಹೊರ ಹಾಕಿದ ನಂತರ ಏನಾಗುತ್ತದೆ ಎಂಬ ಅಂಶದೊಂದಿಗೆ ಈ ಚಿತ್ರ ಸಾಗುತ್ತದೆ’ ಎಂದರು.

Advertisement

ಮಾಜಿ ಸಚಿವ ಬಿ.ಸಿ.ಪಾಟೀಲ್‌ ಅವರು “ಗರಡಿ’ ಚಿತ್ರದ ನಿರ್ಮಾಣದ ಜೊತೆಗೆ ಪ್ರಮುಖ ಪಾತ್ರ ಕೂಡಾ ಮಾಡಿದ್ದಾರೆ. ಇಲ್ಲಿ ಅವರು ಗರಡಿ ಮನೆಯ ಕುಸ್ತಿ ಗುರುವಾಗಿ ಕಾಣಿಸಿಕೊಳ್ಳುತ್ತಿದ್ದಾರೆ. “ಇದು ನನ್ನ ಪ್ರೊಡಕ್ಷನ್‌ನ 16ನೇ ಸಿನಿಮಾ. ಈ ಕಥೆ ಚೆನ್ನಾಗಿದೆ. ಮುಂದೆಯೂ ನಮ್ಮ ಬ್ಯಾನರ್‌ನಲ್ಲಿ ಸಿನಿಮಾ ನಿರ್ಮಿಸಲಿದ್ದೇವೆ’ ಎಂದರು. ಚಿತ್ರದ ವಿಲನ್‌ ಪಾತ್ರದಲ್ಲಿ ಬಿ.ಸಿ.ಪಾಟೀಲ್‌ ಅಳಿಯ ಸುಜಯ್‌ ಬೇಲೂರು ನಟಿಸಿದ್ದಾರೆ.

“ಗರಡಿ’ ಸಿನಿಮಾದ ಪ್ರಮುಖ ಆಕರ್ಷಣೆಗಳಲ್ಲಿ ನಟ ದರ್ಶನ್‌ ಕೂಡಾ ಒಂದು. ಹೌದು, ನಟ ದರ್ಶನ್‌ “ಗರಡಿ’ ಸಿನಿಮಾದಲ್ಲಿ ನಟಿಸಿದ್ದಾರೆ. ಅದು ಅತಿಥಿ ಪಾತ್ರದಲ್ಲಿ. ಸಿನಿಮಾಕ್ಕೆ ಟ್ವಿಸ್ಟ್‌ ಕೊಡುವ ಪಾತ್ರ ಇದಾಗಿದ್ದು, ದರ್ಶನ್‌ ಅಭಿಮಾನಿಗಳಿಗೆ ಅವರ ಎಂಟ್ರಿ ಖುಷಿಕೊಡಲಿದೆ ಎಂಬ ವಿಶ್ವಾಸದಲ್ಲಿದೆ ಚಿತ್ರತಂಡ.

Advertisement

Udayavani is now on Telegram. Click here to join our channel and stay updated with the latest news.

Next