Advertisement

ಶಿರಾಡಿ ಘಾಟ್ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಚಾಲಕ ಗಂಭೀರ

03:38 PM Oct 07, 2021 | Team Udayavani |

ಸಕಲೇಶಪುರ :ಮಂಗಳೂರಿನಿಂದ ಬೆಂಗಳೂರಿಗೆ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ತಾಲೂಕಿನ ಮಾರನಹಳ್ಳಿ ಸಮೀಪ ಗುರುವಾರ ಮುಂಜಾನೆ ನಡೆದಿದೆ.ಘಟನೆಯಲ್ಲಿ ಟ್ಯಾಂಕರ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.

Advertisement

ಟ್ಯಾಂಕರ್ ನಿಂದ ಅನಿಲ ಸೋರಿಕೆಯಾಗುವ ಸಾಧ್ಯತೆಗಳಿದ್ದ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮಾರನಹಳ್ಳಿ ಸಮೀಪ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಿ, ಬದಲಿ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು.

ಟ್ಯಾಂಕರ್ ಉರುಳಿ ಬಿದ್ದ ಪರಿಣಾಮ ಇಂಜಿನ್ ಒಳಗೆ ಚಾಲಕ ಸಿಕ್ಕಿಹಾಕಿಕೊಂಡಿದ್ದು, ಚಾಲಕನನ್ನು ಕ್ರೇನ್ ಸಹಾಯದಿಂದ ಮೇಲಕ್ಕೆತ್ತಲು ಅಗ್ನಿಶಾಮಕ ದಳಡಾ ಸಿಬ್ಬಂದಿಗಳು , ಪೊಲೀಸರು ಮತ್ತು ಸ್ಥಳೀಯರು  ಸುಮಾರು ಎರಡು ಗಂಟೆಗಳ ಕಾಲ ಹರಸಾಹಸ ಪಡುಬೇಕಾಯಿತು.

ಕ್ರೇನ್ ಸಹಾಯದಿಂದ ಟ್ಯಾಂಕರ್ ಮೇಲಕ್ಕೆತ್ತಲಾಗಿದ್ದು, ಅದ್ರಷ್ಟವಷಾತ್ ಅನಿಲ ಸೋರಿಕೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿರುವ ಚಾಲಕನನ್ನ ಹಾಸನ ಜಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next