Advertisement

ಗೌರಿ, ಗಣೇಶ ಮೂರ್ತಿ ವಿಸರ್ಜನೆ

09:05 PM Sep 28, 2019 | Lakshmi GovindaRaju |

ಪಿರಿಯಾಪಟ್ಟಣ: ತಾಲೂಕಿನ ರಾವಂದೂರು ಬಳಿಯ ಹರಳಹಳ್ಳಿ ಗೌರಮ್ಮ ತಾಯಿ ದೇವಾಲಯದಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿ ಹಾಗೂ ಗೌರಿ ವಿಗ್ರಹಗಳ ವಿಸರ್ಜನಾ ಕಾರ್ಯಕ್ರಮ ಅದ್ಧೂರಿಯಾಗಿ ಜರುಗಿತು.

Advertisement

ದೇವಾಲಯದಿಂದ ಮೂರ್ತಿಗಳನ್ನು ಹೊರತಂದು ಬಗೆಬಗೆಯ ಹೂ ಹಾಗೂ ವಿದ್ಯುತ್‌ ದೀಪಾಲಂಕಾರ ಮಾಡಿ ಅಲಂಕೃತ ಎತ್ತಿನ ಗಾಡಿಯಲ್ಲಿ ಪ್ರತಿಷ್ಠಾಪಿಸಿ, ಗ್ರಾಮದ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಈ ವೇಳೆ ಪ್ರತಿ ಮನೆಗಳ ಬಳಿ ಪೂಜೆ ಸಲ್ಲಿಸಿದ್ದು ವಿಶೇಷವಾಗಿತ್ತು.

ಬಳಿಕ ಗ್ರಾಮದ ಕೆರೆಯ ಬಳಿ ಕಳಶ ಪೂಜೆ ನಡೆಸಿ ಗೌರಿ ಗಣೇಶ ಮೂರ್ತಿಗಳನ್ನು ವಿಸರ್ಜಿಸಲಾಯಿತು. ದೇವಾಲಯ ಸಮಿತಿ ವತಿಯಿಂದ ಅನ್ನಸಂತರ್ಪಣೆ ನಡೆಯಿತು. ಗೌರಿ ಗಣೇಶ ಹಬ್ಬದ ದಿನದಿಂದ ದೇವಾಲಯದಲ್ಲಿ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪ್ರತಿದಿನ ವಿಶೇಷ ಪೂಜೆ ನೆರವೇರಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next