Advertisement

Gauri Lankesh Case ಹತ್ಯೆ ಆರೋಪಿಗೆ ಸುಪ್ರೀಂಕೋರ್ಟ್‌ ನೋಟಿಸ್‌

12:18 AM Mar 02, 2024 | Team Udayavani |

ಹೊಸದಿಲ್ಲಿ: ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಆರೋಪಿಗೆ ಕರ್ನಾಟಕ ಹೈಕೋರ್ಟ್‌ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಿಚಾರಣೆ ಗೆ ಪರಿಗಣಿಸಿದ್ದು, ಈ ಸಂಬಂಧ ಪ್ರತಿ ಕ್ರಿಯೆ ಕೋರಿ ಆರೋಪಿಗೆ ನೋಟಿಸ್‌ ಜಾರಿಗೊಳಿಸಿದೆ.

Advertisement

2023ರ ಡಿ. 7ರಂದು ಗೌರಿ ಹತ್ಯೆ ಆರೋಪಿಯಾದ ಮೋಹನ್‌ ನಾಯಕ್‌ ಅವರಿಗೆ ಕರ್ನಾಟಕ ಹೈಕೋರ್ಟ್‌ ಜಾಮೀನು ನೀಡಿತ್ತು. ಆರೋಪಿ 5 ವರ್ಷಗಳಿಂದ ಜೈಲಿನಲ್ಲಿದ್ದಾರೆ. ಪ್ರಕರಣದ ತನಿಖೆ ಅನಗತ್ಯವಾಗಿ ವಿಳಂಬವಾಗುತ್ತಿದೆ. ಆದ್ದರಿಂದ ಜಾಮೀನು ನೀಡುತ್ತಿರುವುದಾಗಿ ಹೇಳಿತ್ತು.

ಮೋಹನ್‌ ನಾಯಕ್‌ಗೆ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ಮತ್ತು ಅದನ್ನು ರದ್ದುಗೊಳಿಸು ವಂತೆ ಕೋರಿ ಈಗ ಗೌರಿ ಅವರ ಸಹೋದರಿ ಕವಿತಾ ಲಂಕೇಶ್‌ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಸು.ಕೋ.ನ್ಯಾಯಮೂರ್ತಿಗಳಾದ ವಿಕ್ರಂನಾಥ್‌ ಹಾಗೂ ಸತೀಶ್‌ ಚಂದ್ರ ಶರ್ಮಾ ಅವರ ನ್ಯಾಯಪೀಠ ಅರ್ಜಿ ಆಲಿಸಲು ಒಪ್ಪಿದ್ದು, ಆರೋಪಿಗೆ ನೋಟಿಸ್‌ ಜಾರಿಗೊಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next