Advertisement

ಗೌರಿ ಹತ್ಯೆ ತನಿಖೆ ಚುರುಕು; ಟೋಲ್ ಗೇಟ್ ಸಿಸಿಟಿವಿ ಡಿವಿಆರ್ ವಶಕ್ಕೆ

03:21 PM Sep 11, 2017 | Team Udayavani |

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಯನ್ನು ಎಸ್ಐಟಿ ಅಧಿಕಾರಿಗಳು ಚುರುಕುಗೊಳಿಸಿದ್ದು, ಸೋಮವಾರ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಟೋಲ್ ಗೇಟ್ ಗಳಲ್ಲಿರುವ ಸಿಸಿಟಿವಿ ಡಿವಿಆರ್ ಅನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

Advertisement

ಅಲ್ಲದೇ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ ವಿಶೇಷ ತನಿಖಾ ತಂಡಕ್ಕೆ  ಮತ್ತೆ 40 ಅಧಿಕಾರಿಗಳನ್ನು ಸೇರ್ಪಡೆ ಮಾಡಲಾಗಿದೆ ಎಂದು ಮೂಲಗಳು ಹೇಳಿವೆ.

ಗೌರಿ ಹತ್ಯೆಗೈದ ಹಂತಕರ ಬಂಧನಕ್ಕಾಗಿ ಸಿಸಿಟಿವಿ ಫೂಟೇಜ್ ಬೆನ್ನು ಹತ್ತಿರುವ ಎಸ್ ಐಟಿ ಅಧಿಕಾರಿಗಳು, ಕಳೆದ 3-4 ದಿನಗಳಿಂದ ಪಾರ್ಕ್, ಪೇ ಪಾರ್ಕಿಂಗ್ ಗಳಲ್ಲಿ ನಿಲ್ಲಿಸಿರುವ ಕಾರುಗಳ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ವರದಿ ವಿವರಿಸಿದೆ.

ಎಲ್ಲಾ ಆಯಾಮಗಳಿಂದಲೂ ಎಸ್ ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಒಟ್ಟು 1600 ಸಿಸಿಟಿವಿ ಡಿವಿಆರ್ ವಶಪಡಿಸಿಕೊಂಡಿರುವ ಅಧಿಕಾರಿಗಳು ಹಂತಕರನ್ನು ಶೀಘ್ರವೇ ಬಂಧಿಸುವ ಸಾಧ್ಯತೆ ಇದ್ದಿರುವುದಾಗಿ ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next