Advertisement

ಚಿನ್ನ ಜಪ್ತಿ ಮಾಡಿ ಜಾಗ ಕೊಂಡವರಿಗೆ SIT ನೇತೃತ್ವ! ಕುಮಾರಸ್ವಾಮಿ ಕಿಡಿ

04:55 PM Sep 08, 2017 | Sharanya Alva |

ಬೆಂಗಳೂರು: 1.5 ಕೆಜಿ ಚಿನ್ನ ಜಪ್ತಿ ಮಾಡಿ ಬಾಣಸವಾಡಿಯಲ್ಲಿ ಜಾಗ ಖರೀದಿಸಿದ ವ್ಯಕ್ತಿಗೆ ರಾಜ್ಯ ಸರ್ಕಾರ ಎಸ್ಐಟಿ ನೇತೃತ್ವ ವಹಿಸಿರುವುದಾಗಿ ಗಂಭೀರವಾಗಿ ಆರೋಪಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಇಂಥವರಿಂದ ಹತ್ಯೆ ಕೇಸ್ ನ ತನಿಖೆ ನಡೆಸುವುದು ಸರಿನಾ? ಎಂದು ಪ್ರಶ್ನಿಸಿದ್ದಾರೆ.

Advertisement

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಕುರಿತು ತನಿಖೆ ನಡೆಸಲು ರಾಜ್ಯ ಸರ್ಕಾರ ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್ ಬಿಕೆ ಸಿಂಗ್ ನೇತೃತ್ವದಲ್ಲಿ 21 ಸದಸ್ಯರ ಎಸ್ಐಟಿ ತಂಡವನ್ನು ರಚಿಸಿತ್ತು. ಈ ಬಗ್ಗೆ ಕುಮಾರಸ್ವಾಮಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next