Advertisement

‘ಕೆರೆಬೇಟೆ’ಗೆ ಇಳಿದ ಗೌರಿ ಶಂಕರ್

04:40 PM Oct 26, 2023 | Team Udayavani |

“ಕೆರೆಬೇಟೆ’ ಹೀಗೊಂದು ವಿಭಿನ್ನ ಶೀರ್ಷಿಕೆಯ ಸಿನಿಮಾ ಬಿಡುಗಡೆಯ ಹಂತಕ್ಕೆ ಬಂದಿದೆ. ಈ ಹಿಂದೆ “ಜೋಕಾಲಿ’ ಹಾಗೂ “ರಾಜಹಂಸ’ ಚಿತ್ರಗಳಲ್ಲಿ ನಾಯಕರಾಗಿದ್ದ ಗೌರಿ ಶಂಕರ್‌ ಈ ಚಿತ್ರದ ಮೂಲಕ ಮತ್ತೆ ಬಂದಿದ್ದಾರೆ. ರಾಜ್‌ ಗುರು ಈ ಚಿತ್ರದ ನಿರ್ದೇಶಕರು.

Advertisement

ಕೆರೆಬೇಟೆ ಎಂದರೆ ಮಲೆನಾಡು ಭಾಗದದಲ್ಲಿ ಮೀನು ಬೇಟೆಯಾಡುವ ಒಂದು ಪದ್ಧತಿ. ಮಲೆನಾಡಿನಲ್ಲಿ ವರ್ಷಕೊಮ್ಮೆ ಕೆರೆಬೇಟೆಯಾಡುತ್ತಾರೆ. ದೊಡ್ಡ ಕೆರೆಗಳಲ್ಲಿ ನಡೆಯುತ್ತದೆ. ಇದೇ ಈ ಸಿನಿಮಾದ ಮುಖ್ಯ ಎಳೆಯಾಗಿದೆ. ಅಪ್ಪಟ ಹಳ್ಳಿ ಸೊಗಡಿನ ಸಿನಿಮಾ ಇದಾಗಿದ್ದು ಮಲೆನಾಡ ಭಾಗದ ಕೆರೆಬೇಟೆಯನ್ನು ಸಿನಿಮಾ ಮೂಲಕ ಕಟ್ಟಿಕೊಡುತ್ತಿದ್ದಾರೆ ನಿರ್ದೇಶಕ ರಾಜ್‌ ಗುರು ಮತ್ತು ನಾಯಕ ಗೌರಿ ಶಂಕರ್‌. ಕೆರೆಬೇಟೆ ಚಿತ್ರಕ್ಕೆ ಗಗನ್‌ ಬಡೇರಿಯಾ ಸಂಗೀತ ಸಂಯೋಜನೆ ಮಾಡಿದ್ದಾರೆ.

“ಕೆರೆಬೇಟೆ’ ಜನಮನ ಸಿನಿಮಾ ಸಂಸ್ಥೆಯಡಿ ನಿರ್ಮಾಣವಾಗಿದೆ. ಇದುವರೆಗೂ ನೋಡಿರದ ಒಂದು ಹಳ್ಳಿ ಸೊಗಡಿನ ಕಥೆಯನ್ನು ಈ ಚಿತ್ರ ಹೊಂದಿದೆ ಎನ್ನಲಾಗಿದೆ. ಸದ್ಯ ಟೈಟಲ್‌ ಪೋಸ್ಟರ್‌ ರಿಲೀಸ್‌ ಮಾಡಲಾಗಿದ್ದು, ಇದೇ 27ರಂದು ಚಿತ್ರದ ಮೋಷನ್‌ ಪೋಸ್ಟರ್‌ ರಿಲೀಸ್‌ ಮಾಡುತ್ತಿದೆ ಚಿತ್ರತಂಡ.

ಈ ಚಿತ್ರವನ್ನು ಜೈ ಶಂಕರ್‌ ಪಟೇಲ್‌ ಹಾಗೂ ನಾಯಕ ಗೌರಿ ಶಂಕರ್‌ ಇಬ್ಬರೂ ತಮ್ಮ ಜನಮನ ಸಿನಿಮಾ ಬ್ಯಾನರ್‌ನಲ್ಲಿ ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾವನ್ನು ಸಂಪೂರ್ಣವಾಗಿ ಶಿವಮೊಗ್ಗ ಜಿಲ್ಲೆಯ ಸಿಗಂದೂರ ಹಾಗೂ ಸೊರಬ ಸುತ್ತ-ಮುತ್ತ ಚಿತ್ರೀಕರಣ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next