Advertisement

ಸೋಲಿಗೆ ಅಭಿಮಾನಿಗಳ ಕ್ಷಮೆಯಾಚಿಸಿದ ಗಂಭೀರ್‌

03:40 PM May 21, 2017 | Team Udayavani |

ನವದೆಹಲಿ: ಕೋಲ್ಕತಾ ನೈಟ್‌ ರೈಡರ್ ಕ್ವಾಲಿಫೈಯರ್‌ 2ರಲ್ಲಿ ಮುಗ್ಗರಿಸಿದ್ದಕ್ಕೆ ತಂಡದ ನಾಯಕ ಗೌತಮ್‌ ಗಂಭೀರ್‌ ಅಭಿಮಾನಿಗಳಲ್ಲಿ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.

Advertisement

ಟ್ವೀಟರ್‌ನಲ್ಲಿ ಪ್ರಕಟಿಸಿರುವ ಅವರು, ಕೆಕೆಆರ್‌ಗೆ ಬೆಂಬಲ ನೀಡಿದ್ದಕ್ಕೆ ಧನ್ಯವಾದಗಳು. ಕೂಟದಲ್ಲಿನ ನಮ್ಮ ಒಟ್ಟಾರೆ ಪ್ರದರ್ಶನ ಅಷ್ಟೊಂದು ಚೆನ್ನಾಗಿರಲಿಲ್ಲ. ನಮ್ಮಿಂದ ಸಾಧ್ಯವಾದಷ್ಟು ಪ್ರಯತ್ನ ಮಾಡಿದ್ದೇವೆ. ಅದು ಕೂಡ ಸಾಲಲಿಲ್ಲ. ಇದಕ್ಕಾಗಿ ಕ್ಷಮೆ ಇರಲಿ ಎಂದಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಮುಂಬೈ ವಿರುದ್ಧ ಕೆಕೆಆರ್‌ 6 ವಿಕೆಟ್‌ಗಳಿಂದ ಸೋಲು ಅನುಭವಿಸಿತ್ತು. ಇದರೊಂದಿಗೆ ಅದರ ಫೈನಲ್‌ಗೇರುವ ಕನಸು ಭಗ್ನಗೊಂಡಿತ್ತು.

Advertisement

Udayavani is now on Telegram. Click here to join our channel and stay updated with the latest news.

Next