Advertisement

ಕರ್ನಾಟಕ ತಂಡ ಸೇರಿಕೊಂಡ ಕೆ. ಗೌತಮ್‌, ಪಾಂಡೆ

10:24 PM Mar 02, 2021 | Team Udayavani |

ಬೆಂಗಳೂರು: ವಿಜಯ್‌ ಹಜಾರೆ ಟೂರ್ನಿಯಲ್ಲಿ ಕರ್ನಾಟಕ ಅಮೋಘ ಪ್ರದರ್ಶನ ನೀಡಿ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದೆ. ಈ ನಾಕೌಟ್‌ ಹಂತದ ವೇಳೆ ಕರ್ನಾಟಕ ತಂಡ ಮತ್ತಷ್ಟು ಬಲಿಷ್ಠವಾಗಿ ಕಾಣಿಸಿಕೊಳ್ಳಲಿದೆ. ಇದಕ್ಕೆ ಕಾರಣ, ತಂಡಕ್ಕೆ ಇಬ್ಬರು ಅನುಭವಿ ಆಟಗಾರರ ಸೇರ್ಪಡೆ.

Advertisement

ಮನೀಷ್‌ ಪಾಂಡೆ ಮತ್ತು ಕೃಷ್ಣಪ್ಪ ಗೌತಮ್‌ ಕರ್ನಾಟಕ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್‌ ಮಂಡಳಿ ಅಧಿಕೃತ ಪ್ರಕಟನೆಯಲ್ಲಿ ತಿಳಿಸಿದೆ.

“ಅನುಭವಿ ಆಟಗಾರರಾದ ಮನೀಷ್‌ ಪಾಂಡೆ ಮತ್ತು ಕೃಷ್ಣಪ್ಪ ಗೌತಮ್‌ ಉಪಸ್ಥಿತಿ ತಂಡಕ್ಕೆ ಮತ್ತಷ್ಟು ಬಲವನ್ನು ನೀಡುವುದರಲ್ಲಿ ಯಾವುದೇ ಅನುಮಾನವಿಲ್ಲ’ ಎಂದು ಕೆಎಸ್‌ಸಿಎ ತಿಳಿಸಿದೆ.

ವಿಜಯ್‌ ಹಜಾರೆ ಟೂರ್ನಿಗೂ ಮುನ್ನ ಗಾಯಗೊಂಡಿದ್ದ ಮನೀಷ್‌ ಪಾಂಡೆ ಈಗ ಸಂಪೂರ್ಣ ಚೇತರಿಕೆ ಕಂಡಿದ್ದಾರೆ. ಮತ್ತೂಂದೆಡೆ ಟೀಮ್‌ ಇಂಡಿಯಾದ ನೆಟ್‌ ಬೌಲರ್‌ ಆಗಿ ತೆರಳಿದ್ದ ಕೆ. ಗೌತಮ್‌ ಅವರನ್ನು ತಂಡದಿಂದ ಬಿಡುಗಡೆಗೊಳಿಸಲಾಗಿದೆ.
ವಿಜಯ್‌ ಹಜಾರೆ ಟ್ರೋಫಿಯಲ್ಲಿ “ಎಲೈಟ್‌ ಸಿ’ ವಿಭಾಗಲ್ಲಿದ್ದ ಕರ್ನಾಟಕ ಐದು ಪಂದ್ಯಗಳಲ್ಲಿ ನಾಲ್ಕನ್ನು ಗೆದ್ದು ಅಗ್ರಸ್ಥಾನಿಯಾಗಿ ನಾಕೌಟ್‌ ಪ್ರವೇಶಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next