Advertisement

ಕಾವೇರಿ ಕುರಿತು ಇಂದು ಗಡ್ಕರಿ ಜತೆ ಸಿಎಂ ಚರ್ಚೆ

06:05 AM Jun 18, 2018 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸೋಮವಾರ ಕೇಂದ್ರ ಜಲಸಂಪನ್ಮೂಲ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿಯಾಗಲಿದ್ದು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕುರಿತಂತೆ ಸಮಾಲೋಚನೆ ನಡೆಸಲಿದ್ದಾರೆ.

Advertisement

ನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮುಖ್ಯಮಂತ್ರಿಗಳು ಭಾನುವಾರ ರಾತ್ರಿಯೇ ಬೆಂಗಳೂರಿಗೆ ಹಿಂತಿರುಗಬೇಕಾಗಿತ್ತಾದರೂ ಸೋಮವಾರ ನಿತಿನ್‌ ಗಡ್ಕರಿ ಅವರು ಮಾತುಕತೆಗೆ ಸಮಯ ನೀಡಿದ್ದರಿಂದ ದೆಹಲಿಯಲ್ಲೇ ಉಳಿದುಕೊಂಡಿದ್ದಾರೆ.

ಸುಪ್ರೀಂ ಕೋರ್ಟ್‌ ಆದೇಶದಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದರಿಂದ ಈ ಕುರಿತ ಸಾಧಕ-ಭಾದಕಗಳ ಬಗ್ಗೆ ಮುಖ್ಯಮಂತ್ರಿಯವರು ನಿತಿನ್‌ ಗಡ್ಕರಿ ಅವರೊಂದಿಗೆ ಚರ್ಚಿಸುವರು. ಅಲ್ಲದೆ, ರಾಜ್ಯದ ಹಿತಕ್ಕೆ ಧಕ್ಕೆಯಾಗದಂತೆ ಪ್ರಾಧಿಕಾರದ ಚಟುವಟಿಕೆಗಳನ್ನು ಮುಂದುವರಿಸುವಂತೆ ಮನವಿ ಮಾಡುವರು ಎಂದು ತಿಳಿದುಬಂದಿದೆ. ಇದೇ ವೇಳೆ ಮಹದಾಯಿ ವಿವಾದದ ಕುರಿತೂ ಮುಖ್ಯಮಂತ್ರಿಯವರು ಕೇಂದ್ರ ಸಚಿವರೊಂದಿಗೆ ಮಾತುಕತೆ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿಗಳು ಸೋಮವಾರ ದೆಹಲಿಯಲ್ಲೇ ಇರುವುದರಿಂದ ಬೆಂಗಳೂರಿನ ಅವರ ಪೂರ್ವನಿರ್ಧರಿತ ಕಾರ್ಯಕ್ರಮಗಳು ರದ್ದಾಗಿವೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next