Advertisement

ರಾಜಸ್ಥಾನ ಸಿಎಂ ಗೆಹ್ಲೋಟ್ ನನ್ನ ಸ್ನೇಹಿತ; ಪ್ರಧಾನಿ ಶ್ಲಾಘನೆ

10:56 PM Oct 01, 2021 | Team Udayavani |

ಜೈಪುರ: ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನನ್ನ ಆತ್ಮೀಯ ಸ್ನೇಹಿತ ಎಂದು ಪ್ರಧಾನಿ ನರೇಂದ್ರ ಮೋದಿ ಹೊಗಳಿದ್ದಾರೆ.

Advertisement

ಗುರುವಾರ ನಾಲ್ಕು ವೈದ್ಯಕೀಯ ಕಾಲೇಜುಗಳ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗಹಿಸಿ ಮಾತನಾಡಿದ ಸಂದರ್ಭದಲ್ಲಿ ಪ್ರಧಾನಿಯವರು ಈ ಮಾತುಗಳನ್ನಾಡಿದ್ದಾರೆ.

ಪಂಜಾಬ್‌, ಛತ್ತೀಸ್‌ಗಡದಂತೆ ರಾಜಸ್ಥಾನದಲ್ಲಿ ಕೂಡ ಕಾಂಗ್ರೆಸ್‌ನ ಆಂತರಿಕ ಬೇಗುದಿ ದಿನೇ ದಿನೇ ಹೆಚ್ಚುತ್ತಿರುವಂತೆಯೇ ಈ ಬೆಳವಣಿಗೆ ಹಲವು ಚರ್ಚೆಗಳಿಗೆ ಕಾರಣವಾಗಿದೆ.

ಇದನ್ನೂ ಓದಿ:ಉಪ ಚುನಾವಣೆ: ಸಿದ್ದು-ಡಿಕೆಶಿ ಸಮಾಲೋಚನೆ

“ಗೆಹ್ಲೋಟ್ ಅವರು ರಾಜ್ಯದಲ್ಲಿ ಮಾಡಬೇಕಾಗಿರುವ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳ ಪಟ್ಟಿಯನ್ನು ನನಗೆ ತೋರಿಸಿದ್ದಾರೆ. ಅವರು ಮತ್ತು ನಾನು ಬೇರೆ ಪಕ್ಷದವರಾಗಿರಬಹುದು ಆದರೆ ಅವರು ನನ್ನ ಮೇಲೆ ಹೆಚ್ಚು ನಂಬಿಕೆಯಿಟ್ಟಿದ್ದಾರೆ. ಆ ಸ್ನೇಹ, ನಂಬಿಕೆಯೇ ಪ್ರಜಾಪ್ರಭುತ್ವದ ಶಕ್ತಿ’ ಎಂದು ಅವರು ಹೇಳಿದ್ದಾರೆ.

Advertisement

ಇದೇ ವೇಳೆ, ಗೆಹ್ಲೋಟ್  ಅವರು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ತೆರೆದು, ವೈದ್ಯಕೀಯ ಸಾಮಾಗ್ರಿ ಪಾರ್ಕ್‌ ಮತ್ತು ಬೃಹತ್‌ ಔಷಧ ಪಾರ್ಕ್‌ ತೆರೆಯುವಂತೆಯೂ ಪ್ರಧಾನಿಯವರಲ್ಲಿ ಮನವಿ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next