Advertisement

ಡಿವೈಎಸ್ಪಿ ಗಣಪತಿ ಪ್ರಕರಣದಲ್ಲಿ ಜಾರ್ಜ್ ಗೆ ಸಿಬಿಐ ಕ್ಲೀನ್ ಚಿಟ್ ಸಿಕ್ಕಿದೆ: ಸಿದ್ದರಾಮಯ್ಯ

08:01 PM Apr 16, 2022 | Team Udayavani |

ಚಿಕ್ಕಮಗಳೂರು : ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷವಾಯಿತು. ಅಧಿಕಾರದಲ್ಲಿ ಅವರೇ ಇದ್ದಾರೆ, ಏನು ಬಯಲು ಮಾಡಿದರು ಎಂದು ಸಿಎಂ ಬೊಮ್ಮಾಯಿ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹಗರಣವನ್ನು ಜನರ ಮುಂದೆ ಇಡಬೇಕಾಗುತ್ತದೆ ಎಂದಿದ್ದ ಸಿಎಂಗೆ ತಿರುಗೇಟು ನೀಡಿ ರಾಜ್ಯ- ಕೇಂದ್ರದಲ್ಲೂ ಬಿಜೆಪಿ ಸರ್ಕಾರವಿದೆ. ಸುಮ್ಮನೆ ಸುಳ್ಳು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಬಿಜೆಪಿಯವರಿಗೆ ಸಮರ್ಥನೆ ಮಾಡಿಕೊಳ್ಳಲು ಯಾವುದೇ ವಿಚಾರಗಳಿಲ್ಲ ಎಂದರು.

ಈಶ್ವರಪ್ಪ 40 ಪರ್ಸೆಂಟ್ ಡಿಮ್ಯಾಂಡ್ ಮಾಡದಿದ್ದರೆ ರಾಜೀನಾಮೆ ಯಾಕೆ ಕೊಡುತ್ತಿದ್ದರು?,ಹೈಕಮಾಂಡ್ ಯಾಕೆ ಈಶ್ವರಪ್ಪನವರ ರಾಜೀನಾಮೆ ಪಡೆಯುತ್ತಿತ್ತು?ಎಂದು ಪ್ರಶ್ನೆ ಮಾಡಿದರು.

ಡಿವೈಎಸ್ಪಿ ಗಣಪತಿ ಮತ್ತು ಸಂತೋಷ್ ಪಾಟೀಲ್ ಪ್ರಕರಣವನ್ನು ಹೋಲಿಕೆ ಮಾಡಲು ಆಗುವುದಿಲ್ಲ. ಗುತ್ತಿಗೆದಾರ ಸಂತೋಷ್ ಪಾಟೀಲ್ ನನ್ನ ಸಾವಿಗೆ ಈಶ್ವರಪ್ಪನೇ ಕಾರಣವೆಂದು ಡೆತ್ ನೋಟ್ ನಲ್ಲಿ ಹೇಳಿದ್ದಾರೆ. ವಾಟ್ಸಪ್ ಮೂಲಕ ಎಲ್ಲರಿಗೂ ಮೆಸೇಜ್ ಮಾಡಿದ್ದಾರೆ. ಡಿವೈಎಸ್ಪಿ ಗಣಪತಿ ಪ್ರಕರಣದಲ್ಲಿ ಜಾರ್ಜ್ ಗೆ ಸಿಬಿಐ ಕ್ಲೀನ್ ಚಿಟ್ ಸಿಕ್ಕಿದೆ. ಸಿಬಿಐ ಕೇಂದ್ರ ಸರ್ಕಾರದ ಅಧೀನದಲ್ಲಿ ಇರುವುದಲ್ಲವೇ ? ಬಿಜೆಪಿಗೆ ಗೊತ್ತಿದ್ದೂ ಸುಳ್ಳು ಹೇಳುತ್ತಿದ್ದಾರೆ ಎಂದು ಕಿಡಿಕಾರಿದರು.

Advertisement

Udayavani is now on Telegram. Click here to join our channel and stay updated with the latest news.

Next