Advertisement

ಒಂದೇ ಪಕ್ಷದಿಂದ ಹ್ಯಾಟ್ರಿಕ್‌ ಗೆಲುವ

05:12 PM May 17, 2018 | Team Udayavani |

ಔರಾದ: ಮೂರು ರಾಜ್ಯಗಳಿಗೆ ಅಂಟಿಕೊಂಡಿರುವ ಗಡಿ ತಾಲೂಕು ಔರಾದನಲ್ಲಿ ಬಿಜೆಪಿ ಭದ್ರ ಬುನಾದಿ ಹಾಕುವುದರ ಮೂಲಕ ತಾಲೂಕಿನಲ್ಲಿ ಮಾತ್ರವಲ್ಲ ಬೀದರ ಜಿಲ್ಲೆಯಲ್ಲೇ ಬಿಜೆಪಿಯಿಂದ ಹ್ಯಾಟ್ರಿಕ್‌ ಗೆಲುವು ಸಾಧಿಸಿದ ಮೊದಲ ಶಾಸಕ ಎನ್ನುವ ಹೆಗ್ಗಳಿಕೆಯನ್ನು ಶಾಸಕ ಪ್ರಭು ಚವ್ಹಾಣ ತಮ್ಮದಾಗಿಸಿಕೊಂಡಿದ್ದಾರೆ.

Advertisement

ಚವ್ಹಾಣ ರಾಜಕೀಯ ಮನೆತನದಿಂದ ಬಾರದೇ ಇದ್ದರೂ ಕೂಡ ಬಿಜೆಪಿಯ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ನಾಯಕರೊಂದಿಗೆ ಉತ್ತಮ ಸಂಬಂಧ ಹೊಂದಿ, ಸರಳ ವ್ಯಕ್ತಿತ್ವದ ಮೂಲಕ ಗೆಲುವು ಕಂಡ ಪ್ರಭು ಚವ್ಹಾಣ ಅವರಿಗೆ, ಈ ಬಾರಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಸಚಿವ ಸಂಪುಟದಲ್ಲಿ ಮಂತ್ರಿ ಸ್ಥಾನ ನೀಡಬೇಕು. ಮೂರು ಬಾರಿ ಗೆಲುವು ಸಾಧಿ ಸಿದ ಹಾಗೂ ಬಿಎಸ್‌ವೈ ಆಪ್ತ ವಲಯದಲ್ಲಿ ಗುರುತಿಸಿಕೊಂಡ ಪ್ರಭು ಚವ್ಹಾಣ ಅವರಿಗೆ ಮಂತ್ರಿಸ್ಥಾನ ಸಿಕ್ಕರೆ ಈ ಭಾಗದ ಸಂಪೂರ್ಣ ಅಭಿವೃದ್ಧಿಯಾಗಲಿದೆ ಎನ್ನುವುದು ಈ ಭಾಗದ ಜನರ ಆಶಯವಾಗಿದೆ.

ರಾಜ್ಯ ರಾಜ್ಯಕೀಯ ಅತಂತ್ರ ಸ್ಥಿತಿಯಲ್ಲಿದ್ದು, ಹಲವು ಸಮಸ್ಯೆಗಳಿವೆ. ಮೊದಲು ಪಕ್ಷ ಬಹುಮತ ಸಾಬೀತು ಪಡಿಸಿದ ಬಳಿಕ ಬಿಎಸ್‌ವೈ ಬಳಿ ಮನವಿ ಮಾಡಿಕೊಳ್ಳುತ್ತೇನೆ. ಈಗಾಗಲೆ ನನ್ನ ಕೆಲಸ ಕಾರ್ಯಗಳಿಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಬಾರಿಯ ಸಚಿವ ಸಂಪುಟದಲ್ಲಿ ಮಂತ್ರಿ ಸ್ಥಾನ ಸಿಗುವ ಭರವಸೆಯಿದೆ ಎಂದು ಪ್ರಭು ಚವ್ಹಾಣ ತಿಳಿಸಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next