Advertisement

ಜನರ ಕೆಲಸ ಮಾಡುವವರನ್ನು ಗೆಲ್ಲಿಸಿ: ಜಯಮಾಲಾ

09:08 PM Apr 15, 2019 | sudhir |

ಉಡುಪಿ : ತಮ್ಮ ಕ್ಷೇತ್ರದ ಜನರ ನಡುವೆ ಇದ್ದು ಅವರ ಹಾಗೂ ಊರಿನ ಅಭಿವೃದ್ಧಿಯ ಕೆಲಸ ಮಾಡುವಂತಹ ಸಂಸದರನ್ನು ಆಯ್ಕೆ ಮಾಡಬೇಕಾಗಿದೆ.

Advertisement

ಈ ನಿಟ್ಟಿನಲ್ಲಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್‌ – ಜೆಡಿಎಸ್‌ ಮೈತ್ರಿ ಕೂಟದ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ ಅವರನ್ನು ಗೆಲ್ಲಿಸಬೇಕಾಗಿದೆ ಎಂದು ಉಡುಪಿ ಜಿÇÉಾ ಉಸ್ತುವಾರಿ ಸಚಿವೆ ಡಾ| ಜಯಮಾಲಾ ಹೇಳಿದರು.

ಹಾವಂಜೆ ಕೊಳಲಗಿರಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಪ್ರಮೋದ್‌ ಮಧ್ವರಾಜ್‌ ಅವರು ಶಾಸಕ, ಸಚಿವರಾಗಿದ್ದ
ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿ¨ªಾರೆ. ಜನತೆಯ ಆಶೋತ್ತರಗಳಿಗೆ ಸದಾ ಸ್ಪಂದಿಸುವ ನಾಯಕರಾಗಿರುವ ಅವರಿಗೆ ಅಭಿವೃದ್ಧಿಯ ದೃಷ್ಟಿಕೋನವಿದೆ.

ಬಿಜೆಪಿಯವರು ಕ್ಷೇತ್ರದ ಅಭ್ಯರ್ಥಿಯ ಪರವಾಗಿ ಮತ ಕೇಳುತ್ತಿಲ್ಲ
ಮೋದಿಯನ್ನು ತೋರಿಸಿ ಮತ ಕೇಳುತ್ತಿ¨ªಾರೆ. ಅವರ ಅಭ್ಯರ್ಥಿ ಜನತೆಯ ಆಶೋತ್ತರಗಳಿಗೆ ಸ್ಪಂದಿಸುತ್ತಿದ್ದರೆ ಅವರಿಗೆ ಈ ಪರಿಸ್ಥಿತಿ ಎದುರಾಗುತ್ತಿತ್ತೆ ಎಂದವರು ಪ್ರಶ್ನಿಸಿ¨ªಾರೆ.

ಸಭೆಯಲ್ಲಿ ಜಿÇÉಾ ಕಾಂಗ್ರೆಸ್‌ ನಿಕಟಪೂರ್ವ ಅಧ್ಯಕ್ಷ ಜನಾರ್ದನ ತೋನ್ಸೆ, ಮುಖಂಡರಾದ ರಮೇಶ್‌ ಶೆಟ್ಟಿ, ನಾಗರಾಜ ಹೆಗ್ಡೆ ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next