Advertisement

ಬಿಜೆಪಿ ಬುಡ ಸಮೇತ ಕಿತ್ತೂಗೆಯಿರಿ

06:32 PM Feb 07, 2018 | |

ಕಂಪ್ಲಿ: ರಾಜ್ಯ ಹಾಗೂ ಜಿಲ್ಲೆಯಲ್ಲಿ ಬಿಜೆಪಿಯನ್ನು ಬುಡ ಸಮೇತ ಕಿತ್ತೂಗೆಯಲು ಮುಖಂಡರು, ಕಾರ್ಯಕರ್ತರು ಶ್ರಮಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಕರೆ ನೀಡಿದರು.

Advertisement

ಸಮೀಪದ ದೇವಸಮುದ್ರ ಗ್ರಾಮದ ತುರುಮುಂದಿ ಬಸವೇಶ್ವರ ದೇವಸ್ಥಾನದ ಬಳಿ ಫೆ.10ರಂದು ಹೊಸಪೇಟೆಗೆ ರಾಹುಲ್‌ಗಾಂಧಿ ಆಗಮಿಸುವ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ರಾಹುಲ್‌ ಗಾಂಧಿ ಪಾಲ್ಗೊಳ್ಳುವ ಕಾರ್ಯಕ್ರಮದಲ್ಲಿ ಕಾರ್ಯ ಕರ್ತರೆಲ್ಲರೂ ಪಾಲ್ಗೊಳ್ಳಬೇಕೆಂದು ಆಹ್ವಾನಿಸಲು ಬಂದಿದ್ದೇನೆ. ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸಿ.ಆರ್‌.ಹನುಮಂತ ಟೈಗರ್‌, ಫೈಯರ್‌ನಂತಿದ್ದು, ಪಕ್ಷ ಕಟ್ಟಲು ಆತನೊಂದಿಗೆ ಎಲ್ಲರೂ ಕೈಜೋಡಿಸಿ. ಕಂಪ್ಲಿ ಕ್ಷೇತ್ರದ ಎಲ್ಲಾ ಮುಖಂಡರು ಸಂಘಟಿತರಾಗಿ ಪಕ್ಷ ಸಂಘಟಿಸುವ ಜೊತೆಗೆ ಮುಂಬರುವ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಶ್ರಮಿಸಬೇಕೆಂದು ಸಲಹೆ ನೀಡಿದರು. 

ಬಳ್ಳಾರಿ ಜಿಲ್ಲೆಯಿಂದ ಅದೂ ವಿಜಯದ ಪತಾಕೆ ಹಾರಿಸಿದ ವಿಜಯನಗರ ಸಾಮ್ರಾಜ್ಯದ ಹೊಸಪೇಟೆಯ ವಿಜಯನಗರ ಕ್ಷೇತ್ರದಿಂದಲೇ ರಾಜ್ಯ ಚುನಾವಣೆಯ ರಣಕಹಳೆ ಮೊಳಗಿಸಲು ಫೆ.10ರಂದು ಹೊಸಪೇಟೆಗೆ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ರಾಹುಲ್‌ಗಾಂಧಿಯವರು ಆಗಮಿಸುತ್ತಿದ್ದು, ಕ್ಷೇತ್ರದಿಂದ 40 ಸಾವಿರ ಕಾರ್ಯಕರ್ತರು ಭಾಗವಹಿಸುವ ಮೂಲಕ ರಾಷ್ಟ್ರೀಯ ಅಧ್ಯಕ್ಷರಾದ ಮೇಲೆ ಪ್ರಥಮ ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿರುವ ರಾಹುಲ್‌ ಗಾಂಧಿಯವರಿಗೆ ಅಭೂತಪೂರ್ವ ಸ್ವಾಗತ ನೀಡಬೇಕೆಂದು ಕರೆ ನೀಡಿದರು. 

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಳೆದ ಚುನಾವಣೆಯ ಪೂರ್ವದಲ್ಲಿ ನೀಡಿದ್ದ ಎಲ್ಲಾ165 ಭರವಸೆ ಈಡೇರಿಸಿರುವ ಜೊತೆಗೆ ಬೇರೆ ಬೇರೆ
ಯೋಜನೆಗಳನ್ನು ನೀಡಿ ರಾಜ್ಯದ ಹಿತ ಕಾಪಾಡಿದ್ದು, ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕ ಸ್ಥಾನ ಪಡೆಯುವ ಮೂಲಕ ಪುನಃ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಬಿ.ವಿ.ಶಿವಯೋಗಿ ಮಾತನಾಡಿ, ಬಿಜೆಪಿ ಮತ್ತು ಕಾಂಗ್ರೆಸ್‌ ನಡುವಿನ ವ್ಯತ್ಯಾಸ ಗಮನಿಸಿ ಕಾಂಗ್ರೆಸ್‌ಗೆ ಮತ ನೀಡಬೇಕೆಂದರು. 

ಬ್ಲಾಕ್‌ಕಾಂಗ್ರೆಸ್‌ ಅಧ್ಯಕ್ಷ ಸಿ.ಆರ್‌. ಹನುಮಂತ, ಯುತ್‌ ಕಾಂಗ್ರೆಸ್‌  ಅಧ್ಯಕ್ಷ ಕೆ.ತಿಮ್ಮಯ್ಯ, ಎನ್‌. ಹಬೀಬ್‌ ರೆಹಮಾನ್‌, ಕೆ.ಶ್ರೀನಿವಾಸರಾವ್‌,
ಸಿ.ದೇವನಂದ, ಗುಜ್ಜಲ ನಾಗರಾಜ, ಜೆ.ಎನ್‌.ಗಣೇಶ್‌ ಇತರರಿದ್ದರು. 

Advertisement
Advertisement

Udayavani is now on Telegram. Click here to join our channel and stay updated with the latest news.

Next