Advertisement

ಬಾಡಿಗೆಗೆ ಕಾರು ಪಡೆದು ಬೀಚ್‌ನಲ್ಲಿ ಹುಚ್ಚಾಟ: ಪೇಚಿಗೆ ಸಿಲುಕಿದ ಚಾಲಕ

02:00 PM Jun 17, 2022 | Team Udayavani |

ಪಣಜಿ: ಗೋವಾ ಬೀಚ್‌ನಲ್ಲಿ ಪ್ರವಾಸಿಗನೊಬ್ಬ ಅಜಾಗರೂಕತೆಯಿಂದ ಕಾರನ್ನು ಚಲಾಯಿಸಿ, ಪೇಚಿಗೆ ಸಿಲುಕಿದ ಘಟನೆ ಶುಕ್ರವಾರ (ಜೂ.17) ನಡೆದಿದೆ.

Advertisement

ದೆಹಲಿ ಮೂಲದ ಲಲಿತ್‍ಕುಮಾರ್ ದಯಾಳ್ ಎಂಬಾತ ಬಾಡಿಗೆಗೆ ಕಾರನ್ನು ಪಡೆದು ಕಡಲ ತೀರದಲ್ಲಿ ಚಲಾಯಿಸಿದ್ದಾನೆ. ಈ ವೇಳೆ ಕಾರು ನೀರಿನಲ್ಲಿ ಮುಳುಗಿದೆ.

ಘಟನೆ ಹಣಜುಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ:ರೈತರನ್ನು ಬಲಿ ಕೊಟ್ಟಾಯಿತು, ಈಗ ಸೈನಿಕರ ಸರದಿಯೇ?: ಅಗ್ನಿಪಥ ಯೋಜನೆಗೆ ಸಿದ್ದರಾಮಯ್ಯ ವಿರೋಧ

ಲಲಿತ್‍ಕುಮಾರ್ ಚಲಾಯಿಸುತ್ತಿದ್ದ ಕ್ರೇಟಾ ಕಾರು, ಶೇಟಯೆ ವಾಡಾದ ಸಂಗೀತಾ ಗವಂಡಾಳಕರ್ ರವರಿಗೆ ಸೇರಿದೆ ಎಂದು ತನಿಖೆ ವೇಳೆ ತಿಳಿದು ಬಂದಿದೆ. ಈ ರೀತಿ ವರ್ತಿಸಿ ಇತರರ ಜೀವಕ್ಕೆ ಅಪಾಯವನ್ನುಂಟು ಮಾಡುವ ಪ್ರವಾಸಿಗರ ವಿರುದ್ಧ ಹಾಗೂ ಪ್ರವಾಸಿಗರಿಗೆ ಖಾಸಗಿ ಕಾರುಗಳನ್ನು ನೀಡುವ ಕಾರು ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next