Advertisement

ಗುಲಾಂ ನಬಿ ಆಜಾದ್‌, ಕಮಲ್‌ನಾಥ್‌ ಬೆಂಗಳೂರಿಗೆ

04:35 AM Jul 14, 2019 | Team Udayavani |

ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಉಂಟಾಗಿರುವ ಬಿಕ್ಕಟ್ಟು ನಿವಾರಣೆ ನಿಟ್ಟಿನಲ್ಲಿ ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್‌ನಾಥ್‌ ಹಾಗೂ ಹಿರಿಯ ನಾಯಕ ಗುಲಾಂ ನಬಿ ಆಜಾದ್‌ ಬೆಂಗಳೂರಿಗೆ ಆಗಮಿಸಿದ್ದಾರೆ.

Advertisement

ಶಾಸಕರ ರಾಜೀನಾಮೆ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಆಗಮಿಸಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಸಹಿತ ರಾಜ್ಯ ನಾಯಕರ ಜತೆ ಮಾತನಾಡಿ, ದೆಹಲಿಗೆ ತೆರಳಿದ್ದ ಗುಲಾಂ ನಬಿ ಆಜಾದ್‌ ಮತ್ತೆ ನಗರಕ್ಕೆ ಆಗಮಿಸಿದ್ದಾರೆ.

ರೋಷನ್‌ ಬೇಗ್‌, ರಾಮಲಿಂಗಾರೆಡ್ಡಿ, ಎಂಟಿಬಿ ನಾಗರಾಜ್‌, ಡಾ.ಕೆ.ಸುಧಾಕರ್‌ ಅವರು ರಾಜೀನಾಮೆ ವಾಪಸ್‌ ಪಡೆಯುವ ಸಾಧ್ಯತೆಗಳು ಇರುವ ಹಿನ್ನೆಲೆಯಲ್ಲಿ ಹೈಕಮಾಂಡ್‌ ಈ ಇಬ್ಬರು ನಾಯಕರನ್ನು ಕಳುಹಿಸಿದೆ. ಸಾಧ್ಯವಾದರೆ ಅತೃಪ್ತ ಶಾಸಕರ ಜತೆಯೂ ಅವರು ಮಾತನಾಡಲಿದ್ದಾರೆ ಎಂದು ಹೇಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next