Advertisement

ಗಿರಿಜಾ ಹೆಗಡೆ ರಾಜ್ಯಕ್ಕೆ ದ್ವಿತೀಯ

11:29 PM May 06, 2019 | Team Udayavani |

ಧಾರವಾಡ: ಇಲ್ಲಿನ ವಿದ್ಯಾಗಿರಿಯ ಜನತಾ ಶಿಕ್ಷಣ ಸಮಿತಿಯ ಮಂಜುನಾಥೇಶ್ವರ ಸಿಬಿಎಸ್‌ಸಿ ಶಾಲೆ ವಿದ್ಯಾರ್ಥಿನಿ ಗಿರಿಜಾ ಹೆಗಡೆ ಸಿಬಿಎಸ್‌ಸಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ 500 ಅಂಕಗಳಿಗೆ 497 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾಳೆ.

Advertisement

ಪರೀಕ್ಷೆಗೆ ಹಾಜರಾದ ಎಲ್ಲ ವಿದ್ಯಾರ್ಥಿಗಳು ಪಾಸಾಗಿ ನೂರಕ್ಕೆ ನೂರರಷ್ಟು ಫಲಿತಾಂಶ ದಾಖಲಾಗಿದೆ. ಅದೇ ರೀತಿ ಹುಬ್ಬಳ್ಳಿಯ ಸಿಬಿಎಸ್‌ಸಿ ಶಾಲೆ ಫಲಿತಾಂಶ ಸಹ ನೂರರಷ್ಟಾಗಿದೆ.

ಮಕ್ಕಳ ಸಾಧನೆಗೆ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ| ಡಿ.ವೀರೇಂದ್ರ ಹೆಗ್ಗಡೆ, ಕಾರ್ಯದರ್ಶಿ ಡಾ| ನ.ವಜ್ರಕುಮಾರ, ವಿತ್ತಾ ಧಿಕಾರಿ ಡಾ| ಅಜಿತ ಪ್ರಸಾದ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next