Advertisement

ಗಿರೀಶ್‌ ಭಾರದ್ವಾಜ್‌ಗೆ ವಿಟಿಯು ಗೌ|ಡಾಕ್ಟರೇಟ್‌ 

01:00 AM Mar 19, 2019 | Team Udayavani |

ಸುಳ್ಯ: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಜ್ಞಾನ ಸಂಗಮ ಆವರಣದಲ್ಲಿ ಸೋಮವಾರ ನಡೆದ 18ನೇ ಘಟಿಕೋತ್ಸವದಲ್ಲಿ “ತೂಗು ಸೇತುವೆ’ಗಳ ನಿರ್ಮಾತೃ ಸುಳ್ಯ ಮೂಲದ ಪದ್ಮಶ್ರೀ ಬಿ. ಗಿರೀಶ್‌ ಭಾರದ್ವಾಜ್‌ ಅವರಿಗೆ ಡಾಕ್ಟರ್‌ ಆಫ್‌ ಸೈನ್ಸ್‌ ಗೌರವ ಪದವಿ ಪ್ರದಾನ ಮಾಡಲಾಯಿತು.

Advertisement

ಗೋವಾ ಮುಖ್ಯಮಂತ್ರಿ ಮನೋಹರ್‌ ಪಾರೀಕರ್‌ ನಿಧನ ಹೊಂದಿದ ಹಿನ್ನೆಲೆಯಲ್ಲಿ ಸೋಮವಾರ ದೇಶಾದ್ಯಂತ ಶೋಕಾಚರಣೆ ಘೋಷಿಸಿದ್ದರಿಂದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಮತ್ತು ರಾಜ್ಯಪಾಲ ವಜೂಭಾç ವಾಲಾ 
ಅವರು ಘಟಿಕೋತ್ಸವಕ್ಕೆ ಗೈರಾಗಿದ್ದರು. ವಿಟಿಯು ಕುಲಪತಿ ಪ್ರೊ| ಕರಿಸಿದ್ದಪ್ಪ ಘಟಿಕೋತ್ಸವಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು.

ಚಿನ್ನದ ಹುಡುಗಿಯರು
ದಾವಣಗೆರೆಯ ಜೈನ್‌ ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿಯ ಬಿಇ ಸಿವಿಲ್‌ ಎಂಜಿನಿಯರಿಂಗ್‌ನಲ್ಲಿ ಮೊದಲ ರ್‍ಯಾಂಕ್‌ ಗಳಿಸಿದ ಸುಚಿತಾ ಎನ್‌. 9 ಚಿನ್ನದ ಪದಕ ಪಡೆದು ಬಂಗಾರದ ಹುಡುಗಿಯಾಗಿ ಮಿಂಚಿದರು. ಮಂಗಳೂರಿನ ಸಹ್ಯಾದ್ರಿ ಕಾಲೇಜ್‌ ಆಫ್ ಎಂಜಿನಿಯರಿಂಗ್‌ ಆ್ಯಂಡ್‌ ಮ್ಯಾನೇಜ್‌ಮೆಂಟ್‌ನ ಕಂಪ್ಯೂಟರ್‌ ಸೈನ್ಸ್‌ ವಿಭಾಗದ ಪವಿತ್ರಿ ಬಿ. ಶೆಟ್ಟಿ 4 ಚಿನ್ನದ ಪದಕಗಳಿಗೆ ಪಾತ್ರರಾದರು.

Advertisement

Udayavani is now on Telegram. Click here to join our channel and stay updated with the latest news.

Next