Advertisement

Mangaluru ಬಾಲಕಿ ಅಪಹರಣ, ಅತ್ಯಾಚಾರ ಆರೋಪಿ ಖುಲಾಸೆ

01:24 AM Dec 23, 2023 | Team Udayavani |

ಮಂಗಳೂರು: ಪರಿಶಿಷ್ಟ ಸಮುದಾಯಕ್ಕೆ ಸೇರಿದ ಅಪ್ರಾಪ್ತ ವಯಸ್ಕ ಬಾಲಕಿಯ ಅಪಹರಣ, ಅತ್ಯಾಚಾರ ಪ್ರಕರಣದ ಆರೋಪಿಯನ್ನು ಸಾಕ್ಷ್ಯಾಧಾರಗಳ ಕೊರತೆಯಿಂದ ಮಂಗಳೂರಿನ ದ.ಕ. ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ದೋಷಮುಕ್ತಗೊಳಿಸಿ ತೀರ್ಪಿತ್ತಿದೆ.

Advertisement

ಆರೋಪಿ ಎಂ.ಡಿ. ಇಬ್ರಾರ್‌ ಅಲಿಯಾಸ್‌ ಮುನ್ನ ಖುಲಾಸೆಗೊಂಡವರು. ಅವರ ವಿರುದ್ಧ ನೊಂದ ಬಾಲಕಿ ನೀಡಿದ್ದ ದೂರಿನಂತೆ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ 2019ರ ಮಾರ್ಚ್‌ನಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆರೋಪಿಯನ್ನು ಉಳ್ಳಾಲ ಪೊಲೀಸ್‌ ಠಾಣೆಯವರು ದಸ್ತಗಿರಿ ಮಾಡಿ ಕಾನೂನು ಕ್ರಮ ಕೈಗೊಂಡಿದ್ದರು.

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ಕೈಗೊಳ್ಳಲಾಗಿದ್ದು 16 ಸಾಕ್ಷಿಗಳ ವಿಚಾರಣೆ ಮಾಡಲಾಗಿತ್ತು. ಆರೋಪಿ ಪರ ಹಾಗೂ ಅಭಿಯೋಜಕರ ಪರ ನ್ಯಾಯಾಲಯದಲ್ಲಿ ವಾದ ಹಾಗೂ ಪ್ರತಿವಾದ ಮಂಡನೆ ಆಗಿದ್ದು, ಅದರಂತೆ ನ್ಯಾಯಾಧೀಶೆ ಮಂಜುಳ ಇಟ್ಟಿ ಅವರು ಡಿ. 19ರಂದು ಆರೋಪಿ ವಿರುದ್ಧ ಸೂಕ್ತ ಸಾಕ್ಷ್ಯಾಧಾರ ವಿಲ್ಲದ ಕಾರಣ ಖುಲಾಸೆಗೊಳಿಸಲಾಗಿದೆ ಎಂದು ತೀರ್ಪು ನೀಡಿದ್ದಾರೆ. ಆರೋಪಿ ಪರ ವಕೀಲರಾದ ರಾಘವೇಂದ್ರ ರಾವ್‌, ಗೌರಿ ಶೆಣೈ ಮತ್ತು ನವ್ಯಾ ಸಚಿನ್‌ ವಾದಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next