Advertisement

ಊಟ ಕೊಡಿಸುವುದಾಗಿ ಕರೆದೊಯ್ದು ಆಸ್ಪತ್ರೆ ವಾರ್ಡ್ ಬಾಯ್ ಮತ್ತುಸ್ನೇಹಿತರಿಂದ ಬಾಲಕಿಯ ಅತ್ಯಾಚಾರ

02:50 PM Dec 06, 2020 | keerthan |

ಶಿವಮೊಗ್ಗ: ಆಸ್ಪತ್ರೆಗೆ ಬಂದಿದ್ದ ಬಾಲಕಿಗೆ ಊಟ ಕೊಡಿಸುವುದಾಗಿ ಹೇಳಿ ಕಾರಿನಲ್ಲಿ ಕರೆದೊಯ್ದ ಮೆಗ್ಗಾನ್ ಆಸ್ಪತ್ರೆ ವಾರ್ಡ್ ಬಾಯ್ ಮತ್ತು ಆತನ ಸ್ನೇಹಿತರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಘಟನೆ ಸಂಬಂಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ತಾಯಿಯನ್ನು ನೋಡಿಕೊಳ್ಳಲು ಬಂದಿದ್ದಳು

ಆರೋಗ್ಯ ಸಮಸ್ಯೆ ಹಿನ್ನೆಲೆ ಬಾಲಕಿ ತಾಯಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಆರೈಕೆ ಮಾಡಲು ಬಾಲಕಿ ಕೆಲ ದಿನದಿಂದ ಆಸ್ಪತ್ರೆಯಲ್ಲಿದ್ದಳು. ತಾಯಿಯನ್ನು ವಾರ್ಡ್ ಗೆ ಕರೆದೊಯ್ಯುವುದು, ಚಿಕಿತ್ಸೆಗೆ ಕರೆದೊಯ್ಯುವಾಗ ವಾರ್ಡ್ ಬಾಯ್ ಮನೋಜ್ ಎಂಬಾತನ ಪರಿಚಯವಾಗಿದೆ. ವೀಲ್ ಚೇರ್ ತಂದು ಬಾಲಕಿಯ ತಾಯಿಯನ್ನು ಈತ ಕರೆದೊಯ್ಯುತ್ತಿದ್ದ. ಆಗಾಗ ಊಟ, ತಿಂಡಿ ತಂದು ಕೊಡುತ್ತಿದ್ದ ಎಂದು ಹೇಳಲಾಗುತ್ತಿದೆ.

ನಿಷೇಧಾಜ್ಞೆ ಸಂದರ್ಭದಲ್ಲಿ ದುಷ್ಕೃತ್ಯ

ಗಲಭೆ ಹಿನ್ನೆಲೆ ಶಿವಮೊಗ್ಗದಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ. ಹೊಟೇಲ್ ಗಳೆಲ್ಲ ಬಂದ್ ಆಗಿವೆ. ಬಾಲಕಿಗೆ ಎಲ್ಲಿಯೂ ಊಟ ಸಿಕ್ಕಿರಲಿಲ್ಲ. ವಾರ್ಡ್ ಬಾಯ್ ಮನೋಜ್ ಊಟ ಕೊಡಿಸುವುದಾಗಿ ನಂಬಿಸಿ ಕಾರಿನಲ್ಲಿ ಕರೆದೊಯ್ದಿದ್ದಾನೆ. ಈ ವೇಳೆ ಕಾರಿನಲ್ಲಿ ಮನೋಜ್ ಜೊತೆಗೆ ಆತನ ಮೂವರು ಸ್ನೇಹಿತರು ಇದ್ದರು. ಬಾಲಕಿಯನ್ನು ಸಾಗರ ರಸ್ತೆಯಲ್ಲಿ ಕರೆದೊಯ್ದು ನಿರ್ಜನ ಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

Advertisement

ಬಾಲಕಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ

ಅತ್ಯಾಚಾರದ ವಿಚಾರವನ್ನು ಬಾಲಕಿ ತಾಯಿಗೆ ತಿಳಿಸಿದ್ದು, ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಆರೋಪಿಗಳಿಗೆ ಬಲೆ ಬೀಸಿದ ಪೊಲೀಸ್

ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆ ಕಾರ್ಯ ನಡೆಯುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next