Advertisement

ಉಳ್ಳಾಲ : ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ ; ಕೊಲೆ ಶಂಕೆ!

03:53 PM Mar 10, 2021 | Team Udayavani |

ಉಳ್ಳಾಲ : ಯುವತಿಯೋರ್ವಳು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಕುಂಪಲ ಆಶ್ರಯಕಾಲನಿಯಲ್ಲಿ ನಡೆದಿದೆ.

Advertisement

ಚಿತ್ತಪ್ರಸಾದ್ ಎಂಬವರ ಪುತ್ರಿ ಪ್ರೇಕ್ಷಾ(20) ಶವವಾಗಿ ಪತ್ತೆಯಾದಾಕೆ. ಮಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ವಿದ್ಯಾರ್ಥಿನಿಯಾಗಿದ್ದ ಈಕೆ ರಜೆ ಪಡೆದುಕೊಂಡು ಮನೆಯಲ್ಲೇ ಉಳಿದಿದ್ದಳು. ತಾಯಿ ಅಂಗನವಾಡಿ ಕೆಲಸಕ್ಕೆ ಹೋಗಿದ್ದು, ಪ್ರೇಕ್ಷಾ ಮನೆಯಲ್ಲಿ ಒಬ್ಬಳೇ ಇದ್ದಳು.

ಮಧ್ಯಾಹ್ನ ವೇಳೆ ತಾಯಿ ಊಟಕ್ಕೆಂದು ಮನೆಗೆ ಬಂದ ಸಂದರ್ಭ ಮನೆಯ ಕೋಣೆಯೊಳಗೆ ಪ್ರೇಕ್ಷಾ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳೀಯರು ಕೊಲೆ ಶಂಕೆಯನ್ನು ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಉಳ್ಳಾಲ ಠಾಣಾ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next