Advertisement

ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ: ಬಾಲಕನ ಬಂಧನ

10:52 AM Apr 08, 2018 | Team Udayavani |

ಕೊಪ್ಪ: ಶಾಲೆಯಿಂದ ಮನೆಗೆ ಮರಳುತ್ತಿದ್ದ ವಿದ್ಯಾರ್ಥಿನಿ ಮೇಲೆ ಬಾಲಕ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಘಟನೆ ತಾಲೂಕಿನ ಶಾನುವಳ್ಳಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕೆಸಗೋಡಿನಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Advertisement

6 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯನ್ನು ಕೊಲೆ ಮಾಡಿದ ಸುಮುಖ (16) ಬಂಧಿತ ಆರೋಪಿ. ವಿದ್ಯಾರ್ಥಿನಿ ಶಾಲೆಯಿಂದ ಕೆಸಗೋಡಿನ ತನಕ ಆಟೋದಲ್ಲಿ ಆಗಮಿಸಿ ನಂತರ ಅರ್ಧ ಕಿಲೋ ಮೀಟರ್‌ ದೂರದಲ್ಲಿ ಇರುವ ತಮ್ಮ ಮನೆಗೆ ಕಾಡಿನ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ಶಂಕಿಸಲಾಗಿದೆ.

ಈ ಸಂಬಂಧ ಹರಿಹರಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಯಾಚರಣೆ ನಡೆಸಿದ ಹರಿಹರಪುರ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವೈದ್ಯಕೀಯ ಪರೀಕ್ಷೆಗಾಗಿ ವಿದ್ಯಾರ್ಥಿನಿಯ ಮೃತ ದೇಹವನ್ನು ಕೊಪ್ಪ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಂದ ತನಿಖೆ ಭರವಸೆ: ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಘಟನಾ ಸ್ಥಳಕ್ಕೆ ಹಾಗೂ ಹರಿಹರಪುರ ಪೊಲೀಸ್‌ ಠಾಣೆಗೆ ಜಿಲ್ಲಾ ವರಿಷ್ಠಾಧಿಕಾರಿ ಕೆ. ಅಣ್ಣಾಮಲೈ ಭೇಟಿ ನೀಡಿದ್ದು, ಘಟನೆಗೆ ಸಂಬಂಧಿಸಿದಂತೆ ಮಾಹಿತಿ ಪಡೆದರು. ನಂತರ ಠಾಣೆಯ ಮುಂದೆ ಜಮಾಯಿಸಿದ್ದ ಜನರ ಜೊತೆ ಚರ್ಚೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಈಗಾಗಲೇ ಓರ್ವನನ್ನು ಬಂಧಿಸಲಾಗಿದೆ. ಆತನ ಡಿ.ಎನ್‌.ಎಯನ್ನ ಪರೀಕ್ಷೆಗೆ ಮಣಿಪಾಲ ಆಸ್ಪತ್ರೆಗೆ ಕಳುಹಿಸಲಾಗಿದೆ. ತನಿಖೆಯನ್ನು ಪಾರದರ್ಶಕವಾಗಿ ಮಾಡಲಾಗುತ್ತದೆ. ಆರೋಪಿಗೆ ಕಠಿಣ ಶಿಕ್ಷೆ ನೀಡಲಾಗುವುದು ಎಂದು ಭರವಸೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next