Advertisement

ಫೇಸ್‌ಬುಕ್‌ ಲೈವ್‌ನಲ್ಲೇ ಯುವತಿ ಆತ್ಮಹತ್ಯೆ ಯತ್ನ

12:00 PM Oct 03, 2018 | Team Udayavani |

ವಿಜಯಪುರ: ತನ್ನ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ ಎಂದು ಆರೋಪಿಸಿ ವಿದ್ಯಾರ್ಥಿನಿಯೊಬ್ಬಳು ಫೇಸ್‌ಬುಕ್‌ ಲೈವ್‌ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಂಚಿನಾಳ ತಾಂಡಾದಲ್ಲಿ ಜರುಗಿದೆ.

Advertisement

ಲತಾ ಚಂದು ಚವ್ಹಾಣ ಆತ್ಮಹತ್ಯೆಗೆ ಯತ್ನಿಸಿದ ಯುವತಿ. ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಲತಾಳನ್ನು ಖಾಸಗಿ ಆಸ್ಪತ್ರೆಗೆ ದಾಲಿಸಲಾಗಿದೆ. ಆತ್ಮಹತ್ಯೆಗೆ ಯತ್ನಿಸುವ ಮುನ್ನ ಆಕೆ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣಗಳ ಮೂಲಕ ಸಾರ್ವತ್ರಿಕವಾಗಿ ಪ್ರಸಾರ ಮಾಡಿದ್ದಾಳೆ.

ಪ್ರಧಾನಿ ಮೋದಿ ಹಾಗೂ ಸಿಎಂ ಆಗಿದ್ದ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದೆ. ಪ್ರಧಾನಿ-ಮುಖ್ಯಮಂತ್ರಿ ಕಚೇರಿಗಳಿಂದ ಲಿಖೀತ ಸೂಚನೆ ಬಂದರೂ ಅಧಿ ಕಾರಿಗಳು ನಮ್ಮ ಕುಟುಂಬದ ನೋವು ನಿವಾರಿಸಲು ನೆರವಿಗೆ ಬಂದಿಲ್ಲ. ಮತ್ತೂಂದೆಡೆ ನಮ್ಮ ಕುಟುಂಬದ ವಿರೋ ಧಿಗಳು ತಾವು ಮಾಜಿ ಸಚಿವ ಎಂ.ಬಿ. ಪಾಟೀಲ್‌ ಅವರ ಬೆಂಬಲಿಗರು ಎಂದು ಹೇಳಿಕೊಂಡು ನಮ್ಮ ಕುಟುಂಬದ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ. ನನ್ನ ಶಿಕ್ಷಣದ ಮೇಲೆ ಪರಿಣಾಮ ಬೀರಿದ್ದು ನಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಆಕೆ ಹೇಳಿಕೊಂಡಿದ್ದಾಳೆ. ಇದು ಸಾಮಾಜಿಕ ಬಹಿಷ್ಕಾರ ಅಲ್ಲ. ಎರಡು ಕುಟುಂಬಗಳ ಆಸ್ತಿ ವಿವಾದವಾಗಿದೆ ಎಂದು ಜಿಲ್ಲಾಧಿಕಾರಿಯವರು ಸ್ಪಷ್ಟಪಡಿಸಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next