Advertisement

“ರಾಷ್ಟ್ರೀಯ ಮಿಷನ್”ಗಾಗಿ “ಮಿಸ್ಡ್ ಕಾಲ್”ಅಭಿಯಾನ ಪ್ರಾರಂಭಿಸಿದ ಕೇಜ್ರಿವಾಲ್

01:54 PM Aug 19, 2022 | Team Udayavani |

ನವದೆಹಲಿ: ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಉತ್ತಮ ಕಾರ್ಯವೈಖರಿಯಿಂದಾಗಿ ಜಾಗತಿಕ ಮಟ್ಟದಲ್ಲಿ ಮೆಚ್ಚುಗೆ ವ್ಯಕ್ತವಾದ ಕಾರಣಕ್ಕೆ ಅವರ ಮನೆ ಮೇಲೆ ಸಿಬಿಐ ದಾಳಿ ನಡೆಸಲಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಆಕ್ರೋಶದ ಹೇಳಿಕೆ ನೀಡಿದ್ದಾರೆ.

Advertisement

”ಮಿಸ್ಡ್ ಕಾಲ್” ಅಭಿಯಾನ

ಸಿಬಿಐ ದಾಳಿ ನಡೆಸಿದ ಕೆಲವೇ ಗಂಟೆಗಳ ನಂತರ ಎಎಪಿ ಮುಖ್ಯಸ್ಥ ಕೇಜ್ರಿವಾಲ್ “ರಾಷ್ಟ್ರೀಯ ಮಿಷನ್” ಗಾಗಿ “ಮಿಸ್ಡ್ ಕಾಲ್” ಅಭಿಯಾನವನ್ನು ಪ್ರಾರಂಭಿಸಿದ್ದು, ದೇಶದ 130 ಕೋಟಿ ಜನರನ್ನು “ಭಾರತವನ್ನು ವಿಶ್ವದ ಬಲಿಷ್ಠ ರಾಷ್ಟ್ರವನ್ನಾಗಿ ಮಾಡುವಂತೆ” ಒತ್ತಾಯಿಸಿದ್ದಾರೆ.

“ನಾನು ಇಂದು ಸಂಖ್ಯೆಯನ್ನು ನೀಡುತ್ತಿದ್ದೇನೆ, ಮಿಸ್ಡ್ ಕಾಲ್ ಸಂಖ್ಯೆ 9510001000. ಈ ಮಿಷನ್‌ಗೆ ಸೇರಲು ಬಯಸುವವರು, ಭಾರತವನ್ನು ವಿಶ್ವದ ನಂಬರ್ 1 ರಾಷ್ಟ್ರವಾಗಿ, ಅತ್ಯಂತ ಶಕ್ತಿಶಾಲಿ ರಾಷ್ಟ್ರವಾಗಿ ನೋಡಲು ಬಯಸುವವರು. ಅತ್ಯುತ್ತಮ ರಾಷ್ಟ್ರವು ಈ ಮಿಷನ್‌ಗೆ ಸೇರಿಕೊಳ್ಳಬೇಕು,” ಎಂದು ಕರೆ ನೀಡಿದ್ದಾರೆ.

ಈ ಹಿಂದೆ ಸಿಬಿಐ ದಾಳಿ ನಡೆದಿದ್ದು, ಈ ಬಾರಿಯೂ ಏನೂ ಆಗುವುದಿಲ್ಲ. ಸಿಬಿಐ ನಡೆ ಸ್ವಾಗತಾರ್ಹ. ಸಂಪೂರ್ಣ ಸಹಕಾರ ನೀಡಲಿದೆ. ಈ ಹಿಂದೆಯೂ ದಾಳಿ ಮತ್ತು ತನಿಖೆ ನಡೆದಿತ್ತು. ಏನೂ ಹೊರಬರಲಿಲ್ಲ. ಈಗ ಏನೂ ಹೊರಬರುವುದಿಲ್ಲ” ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

Advertisement

ದೆಹಲಿ ಅಬಕಾರಿ ನೀತಿ 2021-22ಕ್ಕೆ ಸಂಬಂಧಿಸಿದಂತೆ ಸಿಬಿಐ ಶುಕ್ರವಾರ ಬೆಳಿಗ್ಗೆ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನಿವಾಸ ಸೇರಿದಂತೆ 10 ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿದೆ.

“ದೆಹಲಿಯ ಶಿಕ್ಷಣ ಮಾದರಿಯನ್ನು ಮೆಚ್ಚಿದ ದಿನ ಮತ್ತು ಮನೀಶ್ ಸಿಸೋಡಿಯಾ ಅವರ ಫೋಟೋ ಅಮೆರಿಕದ ಅತಿದೊಡ್ಡ ಪತ್ರಿಕೆ NYT ಯ ಮೊದಲ ಪುಟದಲ್ಲಿ ಕಾಣಿಸಿಕೊಂಡ ದಿನವೇ ಈ ದಾಳಿ ನಡೆದಿದೆ.

ಕಳೆದ ತಿಂಗಳು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಅವರು ಅಕ್ರಮಗಳ ಕುರಿತು ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದರು. ಈ ಸಂಬಂಧ 11 ಅಬಕಾರಿ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದರು.ನೀತಿಯಲ್ಲಿನ ಅಕ್ರಮಗಳ ಬಗ್ಗೆ ಸಿಬಿಐ ತನಿಖೆಗೆ ಸಿಸೋಡಿಯಾ ಕೂಡ ಒತ್ತಾಯಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next