Advertisement

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

08:54 AM May 02, 2024 | Team Udayavani |

ಬನಾಸಂಕಾಠಾ: ಧರ್ಮದ ಆಧಾರದ ಮೇಲೆ ಕಾಂಗ್ರೆಸ್‌ ಮೀಸಲಾತಿಯನ್ನು ನೀಡಲು ಉದ್ದೇಶಿಸಿದೆ. ನೀವು ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಲ್ಲ ಎಂದು ಬರೆದು ಕೊಡುತ್ತೀರಾ ಎಂದು ಕಾಂಗ್ರೆಸ್‌ ಮತ್ತು ಇಂಡಿಯಾ ಒಕ್ಕೂಟಕ್ಕೆ ಪ್ರಧಾನಿ ಮೋದಿ ಅವರು ಸವಾಲು ಹಾಕಿದ್ದಾರೆ.

Advertisement

ಗುಜರಾತ್‌ನ ಬನಾಸಂಕಾಠಾ ಜಿಲ್ಲೆಯ ದೀಸಾ ಪಟ್ಟಣದಲ್ಲಿ ಆಯೋಜಿಸಲಾಗಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಮೋದಿ ಮತ್ತು ಬಿಜೆಪಿ ಇರೋವರೆಗೂ ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಇಡಬ್ಲ್ಯುಎಸ್‌ ಮೀಸಲಾತಿಯನ್ನು ಯಾರೂ ಕಿತ್ತುಕೊಳ್ಳಲು ಸಾಧ್ಯವಿಲ್ಲ ಎಂದರು.

ಮೋದಿಯಿಂದ ಸಂವಿಧಾನ ಪೂರ್ಣ ಜಾರಿ: ಸಂವಿಧಾನ ಅಪಾಯದಲ್ಲಿದೆ. ಮೀಸಲಾತಿಯನ್ನು ರದ್ದು ಮಾಡಲಾಗುತ್ತದೆ ಎಂದು ಕಾಂಗ್ರೆಸ್‌ ನಾಯಕರು ಆರೋಪಿಸುತ್ತಿದ್ದಾರೆ. ವಾಸ್ತವದಲ್ಲಿ ತನ್ನ 70 ವರ್ಷದ ಆಡಳಿತದಲ್ಲಿ ಕಾಂಗ್ರೆಸ್‌ ದೇಶಾದ್ಯಂತ ಸಂವಿಧಾನ ಜಾರಿ ಮಾಡಲಿಲ್ಲ. ಜಮ್ಮು ಮತ್ತು ಕಾಶ್ಮೀರದಲ್ಲಿ ದೇಶದ ಸಂವಿಧಾನ ಜಾರಿಯಾಗಿರಲಿಲ್ಲ. ಅದನ್ನು ಜಾರಿ ಮಾಡಿದ್ದು ಈ ಮೋದಿ. ಯಾಕೆಂದರೆ ಮೋದಿ ಸಂವಿಧಾನಕ್ಕೆ ಬದ್ಧರಾಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಗುಜರಾತ್‌ನ ಹಿಮ್ಮತ್‌ನಗರದ ಚುನಾವಣ ರ್ಯಾಲಿಯಲ್ಲಿ ಹೇಳಿದರು.

ಕಾಂಗ್ರೆಸ್‌ನ ಶೆಹಜಾದ್‌ (ರಾಜಕುಮಾರ್‌) ಮೋದಿ 3ನೇ ಬಾರಿಗೆ ಅಧಿಕಾರಕ್ಕೆ ಬಂದರೆ ದೇಶ ಹೊತ್ತಿ ಉರಿಯಲಿದೆ ಎಂದು ಹೇಳಿದ್ದಾರೆ. ವಾಸ್ತವದಲ್ಲಿ ಕಾಂಗ್ರೆಸ್ಸೇ ಹೊತ್ತಿ ಉರಿಯುತ್ತಿದೆ. ಅವರ ಕನಸುಗಳು ಸುಟ್ಟು ಬೂದಿಯಾಗಿದ್ದರಿಂದ ಇಂಥ ಆರೋಪಗಳನ್ನು ಮಾಡುತ್ತಿದ್ದಾರೆಂದು ಪ್ರಧಾನಿ ಮೋದಿ ಕಾಂಗ್ರೆಸ್‌ ಹಾಗೂ ರಾಹುಲ್‌ ಗಾಂಧಿ ವಿರುದ್ಧ ವಾಗ್ಧಾಳಿ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next