Advertisement

ಬಿಜೆಪಿಗೆ ಬಹುಮತ ಕೊಡಿಸಿ: ಯಡಿಯೂರಪ್ಪ

10:48 PM Nov 19, 2021 | Team Udayavani |

ಗದಗ: ಸ್ಥಳೀಯ ಸಂಸ್ಥೆಯಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿ ಮೇಲ್ಮನೆಯಲ್ಲಿ ಬಿಜೆಪಿಗೆ ಬಹುಮತ ಒದಗಿಸಬೇಕು. ಆ ನಿಟ್ಟಿನಲ್ಲಿ ಬಿಜೆಪಿ ಸದಸ್ಯರು ತಮ್ಮ ಮತ ನೀಡುವುದರ ಜತೆಗೆ ಇತರ ಪಕ್ಷಗಳಿಗೆ ಹೋಗಬಹುದಾದ ಒಬ್ಬಿಬ್ಬರ ಮತಗಳನ್ನೂ ಬಿಜೆಪಿಗೆ ಸೆಳೆಯುವ ಸಂಕಲ್ಪ ಮಾಡಬೇಕೆಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಕರೆ ನೀಡಿದರು.

Advertisement

ನಗರದಲ್ಲಿ ಶುಕ್ರವಾರ ಜಿಲ್ಲಾ ಬಿಜೆಪಿ ಘಟಕ ಆಯೋಜಿಸಿದ್ದ ಜನ ಸ್ವರಾಜ್‌ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿಧಾನಸಭೆಯಲ್ಲಿ ಬಿಜೆಪಿ ಬಹುಮತ ಪಡೆದಿದ್ದರೂ, ವಿಧಾನ ಪರಿಷತ್‌ನಲ್ಲಿ ಬಹು ಮತದ ಕೊರತೆಯಿಂದಾಗಿ ಜನರ ಪ್ರಗತಿಗೆ ಪೂರಕವಾದ ಮಸೂದೆಗಳು ಅಂಗೀಕಾರವಾಗುತ್ತಿಲ್ಲ. ಕಾರಣ ಈ ಬಾರಿ 25 ಸ್ಥಾನಗಳ ಪೈಕಿ 20ರಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ. ಅಭ್ಯರ್ಥಿ ಯಾರೇ ಆಗಿದ್ದರೂ, ಮೊದಲ ಪ್ರಾಶಸ್ತ್ಯದ ಮತದಿಂದ ಗೆಲ್ಲಿಸಬೇಕು ಎಂದು ತಿಳಿಸಿದರು.

ಇದನ್ನೂ ಓದಿ:ಬಡವರು, ದಲಿತರು, ರೈತರ ಬಗ್ಗೆ ಇಂದಿರಾಗಾಂಧಿ ಕಳಕಳಿ ಅಪಾರ

ದೊಡ್ಡ ಮೊತ್ತದ ಪರಿಹಾರ ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದ ಆಗಿರುವ ಬೆಳೆ ಹಾನಿಗೆ ರೈತರಿಗೆ ದೊಡ್ಡ ಮೊತ್ತದ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದ ಗಮನ ಸೆಳೆಯುವುದಾಗಿ ಭರವಸೆ ನೀಡಿದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next