Advertisement

ಬಿಜೆಪಿ-ಕಾಂಗ್ರೆಸ್‌ಗೆ ದಿಟ್ಟ ಉತ್ತರ ನೀಡಿ: ಕುಮಾರಸ್ವಾಮಿ

09:07 PM Feb 20, 2023 | Team Udayavani |

ಬೆಂಗಳೂರು: ಜೆಡಿಎಸ್‌ ವಿರುದ್ಧ ಮಾತನಾಡುವ ಬಿಜೆಪಿ ಹಾಗೂ ಕಾಂಗ್ರೆಸ್‌ ನಾಯಕರಿಗೆ ದಿಟ್ಟ ಉತ್ತರ ನೀಡಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

Advertisement

ಪಕ್ಷದ ಕಾರ್ಯಕರ್ತರ ಜತೆ ಫೋನ್‌ ಸಂವಾದ ಮಾಡಿದ ಅವರು, ಕಾಂಗ್ರೆಸ್‌ ಮತ್ತು ಬಿಜೆಪಿ ದೌರ್ಜನ್ಯದ ಬಗ್ಗೆ ಎದೆಗುಂದಬೇಡಿ. ಯಾವುದೇ ಕ್ಷಣದಲ್ಲಿ ನಿಮಗೆ ತೊಂದರೆ ಆದರೆ ನನ್ನನ್ನು ಕೂಡಲೇ ಸಂಪರ್ಕಿಸಿ. ನಿಮ್ಮ ನೆರವಿಗೆ ಧಾವಿಸುತ್ತೇನೆಂದು ಭರವಸೆ ನೀಡಿದರು.

ಯಾವುದೇ ಕಾರಣಕ್ಕೂ ಕಾರ್ಯಕರ್ತರನ್ನು ಬಿಟ್ಟುಕೊಡುವ ಪ್ರಶ್ನೆ ಇಲ್ಲ. ನಮ್ಮ ಕಾರ್ಯಕರ್ತರು ಇಂಥ ಬೆದರಿಕೆ, ಒತ್ತಡ ತಂತ್ರಗಳಿಗೆ ಅಂಜಬಾರದು. ಇಂಥ ಬೆದರಿಕೆಗಳಿಗೆ ನಾವು ತಕ್ಕ ಉತ್ತರ ನೀಡುತ್ತೇವೆ ಎಂದು ಹೇಳಿದರು.

ಎಚ್‌.ಡಿ.ದೇವೇಗೌಡರು ಮುಖ್ಯಮಂತ್ರಿ, ಪ್ರಧಾನಿಯಾಗಿ ರಾಜ್ಯಕ್ಕೆ ನೀಡಿದ ಕೊಡುಗೆಗಳು ಹಾಗೂ ನಾನು ಮುಖ್ಯಮಂತ್ರಿಯಾಗಿ ಎರಡು ಅವಧಿಗಳಲ್ಲಿ ಮಾಡಿದ ಕೆಲಸಗಳ ಬಗ್ಗೆ ಜನರಿಗೆ ವಿವರವಾಗಿ ತಿಳಿಸಿ ಎಂದು ನಿರ್ದೇಶನ ನೀಡಿದರು.

ಸಂವಾದದಲ್ಲಿ ಅಳಲು ತೋಡಿಕೊಂಡ ಅನೇಕ ಕಾರ್ಯಕರ್ತರು, ಬಿಜೆಪಿ ಕಾರ್ಯಕರ್ತರ ದೌರ್ಜನ್ಯ ಎಲ್ಲೆ ಮೀರಿದ್ದು, ಸುಳ್ಳು ಕೇಸುಗಳನ್ನು ತಮ್ಮ ಮೇಲೆ ಹಾಕಿ ಕಿರುಕುಳ ನೀಡಲಾಗುತ್ತಿದೆ ಎಂದು ದೂರಿದರು.

Advertisement

ಇಂದಿನಿಂದ ಮತ್ತೆ ಪಂಚರತ್ನ ಯಾತ್ರೆ
ಬೆಂಗಳೂರು: ಶಿವರಾತ್ರಿ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಕಾಲ ಪಂಚರತ್ನ ರಥಯಾತ್ರೆಗೆ ಬ್ರೇಕ್‌ ತೆಗೆದುಕೊಂಡಿದ್ದ ಎಚ್‌.ಡಿ. ಕುಮಾರಸ್ವಾಮಿ ಅವರು ಮಂಗಳವಾರ, ಫೆ. 21ರಿಂದ ಮತ್ತೆ ಆರಂಭಿಸಲಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಕ್ಷೇತ್ರದಿಂದ ರಥಯಾತ್ರೆ ಆರಂಭವಾಗಿದ್ದು, ಫೆ. 22ರಂದು ಶಿವಮೊಗ್ಗ ಗ್ರಾಮಾಂತರ, 23ರಂದು ಶಿವಮೊಗ್ಗ ಗ್ರಾಮಾಂತರ ಹಾಗೂ ಸೊರಬ, 24ರಂದು ಯಲ್ಲಾಪುರ ಮತ್ತು ತೀರ್ಥಹಳ್ಳಿ, 25ರಂದು ತೀರ್ಥಹಳ್ಳಿ ಹಾಗೂ ಕೊಪ್ಪ, 26ರಂದು ಶೃಂಗೇರಿ, ಕೊಪ್ಪ, 28ರಂದು ಚಿಕ್ಕಮಗಳೂರು ಹಾಗೂ ಮಾರ್ಚ್‌ 1ರಂದು ಮೂಡಿಗೆರೆ ಕ್ಷೇತ್ರಗಳಲ್ಲಿ ಪಂಚರತ್ನ ರಥಯಾತ್ರೆ ನಡೆಯಲಿದೆ.

ಫೆ. 27ರಂದು ಪಕ್ಷದ ಬೃಹತ್‌ ಸಮಾವೇಶ ಇದ್ದು, ಅಂದು ಪಂಚರತ್ನ ರಥಯಾತ್ರೆಗೆ ಬಿಡುವು ಕೊಡಲಾಗಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next