Advertisement

ಕೋವಿಡ್‌ ವಾರಿಯರ್ಸ್ ಗಳಿಗೆ ಶೌರ್ಯ ಪುರಸ್ಕಾರ, ವಿಶೇಷ ನಗದು ಪುರಸ್ಕಾರ ನೀಡಿ: ದೇಶಪಾಂಡೆ.

06:46 PM May 30, 2020 | Sriram |

ಬೆಂಗಳೂರು: ಕೋವಿಡ್‌-19 ನಿಯಂತ್ರಣದಲ್ಲಿ ಅಗತ್ಯ ಸೇವೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಶೌರ್ಯ ಪುರಸ್ಕಾರ, ವಿಶೇಷ ನಗದು ಬಹುಮಾನ ನೀಡಿ ಎಂದು ಶಾಸಕ ಆರ್.ವಿ.ದೇಶಪಾಂಡೆ ಒತ್ತಾಯಿಸಿದ್ದಾರೆ.

Advertisement

ಈ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಅವರು, ವೈದ್ಯರು, ದಾದಿಯರು ಪ್ಯಾರಾಮೆಡಿಕಲ್ ಸಿಬ್ಬಂದಿಗಳು, ಪೊಲೀಸ್ ಇಲಾಖೆ ಸಿಬ್ಬಂದಿ, ಅಂಚೆ ಇಲಾಖೆ ಸೇರಿದಂತೆ ಹಲವು ಇಲಾಖೆಯವರು ತಮ್ಮ ಆರೋಗ್ಯ ಹಾಗೂ ಪ್ರಾಣವನ್ನು ಲೆಕ್ಕಿಸದೇ ಕೋವಿಡ್‌ ವಾರಿಯರ್ಸ್ ಗಳಾಗಿ, ತಮ್ಮ ಕುಟುಂಬದಿಂದ ದೂರವಿದ್ದು ರೋಗಿಗಳಿಗೆ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದಾರೆ. ಅವರಿಗೆ ಯಾವುದೇ ರೀತಿಯ ವಿಶೇಷ ಸವಲತ್ತು ನೀಡಬೇಕು. ಅವರಿಗೆ ಶೌರ್ಯ ಪ್ರಶಸ್ತಿ ಹಾಗೂ ವಿಶೇಷ ನಗದು ಪುರಸ್ಕಾರ ನೀಡಬೇಕು ಎಂದು ತಮ್ಮ ಪತ್ರದಲ್ಲಿ ಮಾನ್ಯ ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next