Advertisement

ಸತೀಶ ಜಾರಕಿಹೊಳಿಗೆ ಡಿಸಿಎಂ ಸ್ಥಾನ ಕೊಡಿ: ವಾಲ್ಮೀಕಿ ನಾಯಕ ಸಮಾಜದ ಒತ್ತಾಯ

11:33 AM May 16, 2023 | Team Udayavani |

ಕೊಪ್ಪಳ: ಕಾಂಗ್ರೆಸ್ ನಾಯಕ ಸತೀಶ ಜಾರಕಿಹೊಳಿ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ಕೊಡಬೇಕು ಎಂದು ವಾಲ್ಮೀಕಿ ನಾಯಕ ಸಮಾಜ ಒತ್ತಾಯ ಮಾಡಿದೆ.

Advertisement

ಕೊಪ್ಪಳದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಾಜದ ಮುಖಂಡ ಟಿ ರತ್ನಾಕರ, ವಾಲ್ಮೀಕಿ ಸಮಾಜ ಈ ಬಾರಿ ಕಾಂಗ್ರೆಸ್ ಗೆ ಬಹುಪಾಲು ಬೆಂಬಲ ನೀಡಿದೆ. ಕಾಂಗ್ರೆಸ್ ನಲ್ಲಿ 15 ಎಸ್ ಟಿ ಶಾಸಕರು ಆಯ್ಕೆಯಾಗಿದ್ದಾರೆ. ಇದು ವಾಲ್ಮೀಕಿ ಸಮಾಜವು ಕಾಂಗ್ರೆಸ್ ಗೆ ನೀಡಿದ ಕೊಡುಗೆ ಎಂದಿದ್ದಾರೆ.

ಸತೀಶ್ ಜಾರಕಿಹೊಳೆ ಅವರು ನಾನು ಸಿಎಂ ಸ್ಥಾನದ ಆಕಾಂಕ್ಷಿ ಅಲ್ಲ ಎಂದಿದ್ದಾರೆ. ಆದರೆ ಅವರಿಗೆ ಡಿಸಿಎಂ ಸ್ಥಾನ ಕೊಡಲಿ. ಕಾಂಗ್ರೆಸ್ ಪಕ್ಷಕ್ಕೆ ಸತೀಶ್ ಜಾರಕಿಹೊಳಿ ಅವರ ಕೊಡುಗೆ ಹೆಚ್ಚಿದೆ. ಅವರಿಗೆ ಡಿಸಿಎಂ ಸ್ಥಾನ ಕೊಡಬೇಕು. ಕಾಂಗ್ರೆಸ್ ಹೈಕಮಾಂಡ್ ಈ ಬಗ್ಗೆ ಗಮನಿಸಲಿ ಎಂದರು.

ಇದನ್ನೂ ಓದಿ:WhatsApp: ವಾಟ್ಸಾಪ್‌ ನಲ್ಲಿ ಬಂತು ʼಚಾಟ್‌ ಲಾಕ್‌ʼ ಫೀಚರ್:‌ ಬಳಕೆ ಹೇಗೆ?

ಕಾಂಗ್ರೆಸ್ ಪಕ್ಷ ಅಭೂತಪೂರ್ವ ಗೆಲುವು ಕಂಡಿದೆ. ಬಿಜೆಪಿಯಲ್ಲಿ ನಮಗೆ ಡಿಸಿಎಂ ಸ್ಥಾನದ ಅನ್ಯಾಯವಾಗಿದೆ. ಈಗ ಕಾಂಗ್ರೆಸ್ ಗೆ ನಾವು ಬೆಂಬಲವಾಗಿ ನಿಂತಿದ್ದೇವೆ. ಹಾಗಾಗಿ ಅವರಿಗೆ ಡಿಸಿಎಂ ಸ್ಥಾನ ಕೊಡಲಿ. ಇದು ಸಮಾಜದ ಒಕ್ಕೋರಲಿನ ಒತ್ತಾಯ ಎಂದು ರತ್ನಾಕರ ಹೇಳಿದ್ದಾರೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next