Advertisement

ನರೇಗಾದಡಿ ಉದ್ಯೋಗ ನೀಡಿ: ಜೊಲ್ಲೆ

03:36 PM Apr 21, 2020 | Suhan S |

ಚಿಕ್ಕೋಡಿ: ದೇಶದಲ್ಲಿ ಲಾಕ್‌ಡೌನ್‌ ಇರುವುದರಿಂದ ಜನರು ಸಂಕಷ್ಟದಲ್ಲಿದ್ದಾರೆ. ದುಡಿಯುವ ಜನರಿಗೆ ನರೇಗಾದಲ್ಲಿ ಉದ್ಯೋಗ ನೀಡಬೇಕು ಎಂದು ಸಚಿವೆ ಶಶಿಕಲಾ ಜೊಲ್ಲೆ ಅಧಿಕಾರಿಗಳಿಗೆ ಸೂಚಿಸಿದರು.

Advertisement

ನಿಪ್ಪಾಣಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಶ್ರೀಪೇವಾಡಿ, ಜತ್ರಾಟ ಮುಂತಾದ ಗ್ರಾಮಗಳಿಗೆ ಅಧಿ ಕಾರಿಗಳೊಂದಿಗೆ ಭೇಟಿ ನೀಡಿದ ಅವರು, ಸಾಮಾಜಿಕ ಅಂತರ ಕಾಯ್ದುಕೊಂಡು ದುಡಿಯುವ ಕೈಗೆ ಉದ್ಯೋಗ ನೀಡಬೇಕೆಂದು ರಾಜ್ಯ ಹಾಗೂ ಕೇಂದ್ರ ಸರ್ಕಾರ ಆದೇಶಿಸಿದೆ. ನರೇಗಾ ಯೋಜನೆಯಡಿ 249 ರೂ. ಇದ್ದದ್ದು ಈಗ 275ಕ್ಕೆ ಸರ್ಕಾರ ಹೆಚ್ಚಿಸಿದೆ. ಗ್ರಾಪಂ ಅಧಿಕಾರಿಗಳು ದುಡಿಯುವ ಕೈಗೆ ಕೆಲಸ ನೀಡಬೇಕು ಎಂದರು. ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ| ವಿವಿ ಶಿಂಧೆ ಜನರಲ್ಲಿ ಜಾಗೃತಿ ಮೂಡಿಸಿದರು. ಡಿವೈಎಸ್‌ಪಿ ಮನೋಜ ನಾಯಿಕ, ಸಿಡಿಪಿಒ ಸಾವಿತ್ರಿ ಗುಗ್ಗರಿ, ತಾಪಂ ಇಒ ಮಲ್ಲಿಕಾರ್ಜುನ ಉಳ್ಳಾಗಡ್ಡಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next