Advertisement

TAX ಸಮಪಾಲು ಕೊಡಿ: ಕೇಂದ್ರಕ್ಕೆ ಆಗ್ರಹ; ತೆರಿಗೆ ಪಾಲನ್ನು ಶೇ. 50ಕ್ಕೆ ಏರಿಸಲು ಒತ್ತಾಯ

01:07 AM Sep 13, 2024 | Team Udayavani |

ತಿರುವನಂತಪುರ: ಕೇಂದ್ರ ಸರಕಾರ ಸಂಗ್ರಹಿಸುವ ತೆರಿಗೆ ಹಂಚಿಕೆಯಲ್ಲಿ ಸಮಪಾಲು ದೊರೆಯಬೇಕೆಂಬ ಆಗ್ರಹ ಕೇರಳ ರಾಜಧಾನಿ ತಿರುವನಂತಪುರದಲ್ಲಿ ಗುರುವಾರ ನಡೆದ ಬಿಜೆಪಿಯೇತರ ಐದು ರಾಜ್ಯಗಳ ನಾಯಕರ ಸಭೆಯಲ್ಲಿ ಕೇಳಿ ಬಂತು.

Advertisement

16ನೇ ಹಣಕಾಸು ಆಯೋಗಕ್ಕೆ ರಾಜ್ಯಗಳ ಬೇಡಿಕೆಗೆ ಸಂಬಂಧಿಸಿದಂತೆ ಕರ್ನಾಟಕ, ತೆಲಂಗಾಣ, ತಮಿಳುನಾಡು, ಪಶ್ಚಿಮ ಬಂಗಾಲ ಮತ್ತು ಕೇರಳ ರಾಜ್ಯಗಳ ಹಣಕಾಸು ಸಚಿವರು ಹಾಗೂ ನಾಯಕರು ನಡೆಸಿದ ಸಭೆಯಲ್ಲಿ ಕೇಂದ್ರ ಸರಕಾರದಿಂದ ಆಗುತ್ತಿರುವ ತೆರಿಗೆ ಅನ್ಯಾಯದ ಬಗ್ಗೆ ಚರ್ಚಿಸ ಲಾಯಿತು.

ಒಟ್ಟು ತೆರಿಗೆ ಆದಾಯದಲ್ಲಿ ಕೇಂದ್ರ ಸರಕಾರವು ರಾಜ್ಯಗಳಿಗೆ ನೀಡುವ ಪಾಲನ್ನು ಕಳೆದ ಹಣಕಾಸು ಆಯೋಗವು ಶಿಫಾರಸು ಮಾಡಿದ ಶೇ. 41ರಿಂದ ಶೇ. 50ಕ್ಕೆ ಹೆಚ್ಚಿಸಬೇಕೆಂಬ ಆಗ್ರಹ ಕೇಳಿ ಬಂತು.

ಬೇಡಿಕೆಗಳೇನು?
-ತೆರಿಗೆ ಆದಾಯ ಹಂಚಿಕೆಯಲ್ಲಿ ಆಗುತ್ತಿರುವ ಅನ್ಯಾಯ ತಡೆಯಬೇಕು
-ತೆರಿಗೆಯ ಸಮಪಾಲು ಬಗ್ಗೆ 16ನೇ ಹಣ ಕಾಸು ಆಯೋಗ ಗಮನಹರಿಸ ಬೇಕು
-ತೆರಿಗೆ ಹಂಚಿಕೆ ವೇಳೆ ಹೆಚ್ಚುತ್ತಿರುವ ಕೇಂದ್ರದ ಸೆಸ್‌, ಸರ್‌ಚಾರ್ಜ್‌ ಪರಿಗಣಿಸಬೇಕು

15ನೇ ಹಣಕಾಸು ಆಯೋಗದ ಶಿಫಾರಸುಗಳಿಂದ ರಾಜ್ಯಕ್ಕೆ ಆಗಿರುವ ಅನ್ಯಾಯಕ್ಕೆ 16ನೇ ಹಣಕಾಸು ಆಯೋಗದಲ್ಲಿ ಪರಿಹಾರ ನೀಡಬೇಕಾಗಿದೆ. ಭವಿಷ್ಯದ ದೃಷ್ಟಿಯಲ್ಲಿ ಇದು ನಿರ್ಣಾಯಕ ಘಟ್ಟವಾಗಿದ್ದು, ವೈಯಕ್ತಿಕವಾಗಿ ಹಾಗೂ ಒಟ್ಟಾಗಿ ದಕ್ಷಿಣದ ರಾಜ್ಯಗಳು ದನಿ ಎತ್ತಬೇಕು.
– ಕೃಷ್ಣಬೈರೇಗೌಡ, ಕಂದಾಯ ಸಚಿವ

Advertisement
Advertisement

Udayavani is now on Telegram. Click here to join our channel and stay updated with the latest news.

Next