Advertisement

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

11:41 PM Apr 22, 2024 | Team Udayavani |

ನಾಗಮಂಗಲ: ನಾನು ಮಂಡ್ಯ ಕ್ಷೇತ್ರದ ಅಭ್ಯರ್ಥಿಯಾಗಬೇಕೆಂದುಕೊಂಡಿರಲಿಲ್ಲ. ದೈವಿಚ್ಛೆಯಿಂದ ಆಗಿದ್ದೇನೆ. ನಮ್ಮ ಕುಟುಂಬಕ್ಕೆ ಹಿಂದಿನಿಂದಲೂ ಜಿಲ್ಲೆಯ ಜನತೆ ರಾಜಕೀಯವಾಗಿ ಆಶೀರ್ವಾದ ಮಾಡುತ್ತಾ ಬಂದಿದ್ದಾರೆ. ಜನತೆ ಹಾಲನ್ನಾದರೂ ನೀಡಿ, ವಿಷವನ್ನಾದರೂ ನೀಡಿ ನಾನು ಸ್ವೀಕರಿಸುತ್ತೇನೆ ಎಂದು ಎನ್‌ಡಿಎ ಅಭ್ಯರ್ಥಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

Advertisement

ನಗರದಲ್ಲಿ ಆಯೋಜಿಸಿದ್ದ ಬೃಹತ್‌ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ನನ್ನ ರಾಜಕೀಯ ಭವಿಷ್ಯ ಇರುವುದು ಮಂಡ್ಯ ಜಿಲ್ಲೆಯ ಜನರ ಕೈಯಲ್ಲಿಯೇ ಹೊರತು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಕೈಯಲ್ಲಲ್ಲ ಎಂದು ಹೇಳುವ ಮೂಲಕ, “ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ ಕುಮಾರಸ್ವಾಮಿ ಸೋಲು ಅಷ್ಟೇ ಸತ್ಯ’ ಎಂದು ಹೇಳಿದ್ದ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದರು.

 

Advertisement

Udayavani is now on Telegram. Click here to join our channel and stay updated with the latest news.

Next