Advertisement

ಜಿಎಸ್‌ಟಿ ಲಾಭ ಗ್ರಾಹಕರಿಗೆ ನೀಡಿ

06:00 AM Nov 19, 2017 | Team Udayavani |

ಬೆಂಗಳೂರು: ಸರಕು, ಸೇವಾ ತೆರಿಗೆ  (ಜಿಎಸ್‌ಟಿ) ಇಳಿಕೆ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸ ದಿದ್ದರೆ ಉತ್ಪಾದಕರು ಹಾಗೂ ಡೀಲರ್‌ಗಳ ವಿರುದ್ಧ ಕಠಿನ ಕ್ರಮ ಖಚಿತ ಎಂದು ಬಿಹಾರದ ಉಪ ಮುಖ್ಯಮಂತ್ರಿ ಹಾಗೂ ಜಿಎಸ್‌ಟಿ ರಾಜ್ಯ ಹಣಕಾಸು ಸಚಿವರ ಸಮಿತಿಯ ಅಧ್ಯಕ್ಷ ಸುಶೀಲ್‌ ಕುಮಾರ್‌ ಮೋದಿ ಎಚ್ಚರಿಕೆ ನೀಡಿದ್ದಾರೆ.

Advertisement

ಶನಿವಾರ ಬೆಂಗಳೂರಿನಲ್ಲಿ ನಡೆದ ಜಿಎಸ್‌ಟಿ ಸಮಿತಿಯ 4ನೇ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಎಸ್‌ಟಿ ವ್ಯವಸ್ಥೆಗೆ ಜನರು ಹೊಂದಿಕೊಳ್ಳುತ್ತಿದ್ದಾರೆ. ಜನ ಸೇರಿ ವ್ಯಾಪಾರ-ವ್ಯವಹಾರ ದೂರುಗಳ ಸಂಖ್ಯೆಯೂ ಕಡಿಮೆಯಾಗಿದೆ. ಜಿಎಸ್‌ಟಿಯಡಿ ತೆರಿಗೆ ಪ್ರಮಾಣ ಇಳಿಕೆಯ ಲಾಭ ಗ್ರಾಹಕರಿಗೆ ಸಿಗಬೇಕು. ಉತ್ಪಾದಕರು ಹಾಗೂ ಡೀಲರ್‌ಗಳು ತೆರಿಗೆ ಇಳಿಕೆಯ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸದೆ ವಂಚಿಸುವುದು ಕಂಡುಬಂದರೆ, ರಾಜ್ಯ ಜಿಎಸ್‌ಟಿ ಪರಿಶೀಲನಾ ಸಮಿ ತಿಗೆ ದೂರು ನೀಡಬಹುದು. ಆ ಮೂಲಕ ಕ್ರಮ ತೆಗೆದು ಕೊಳ್ಳಲಾಗುತ್ತದೆ ಎಂದು ಹೇಳಿದರು.

ಜಿಎಸ್‌ಟಿ ಜಾರಿಯಿಂದ ದೇಶದ ಆರ್ಥಿಕ ವ್ಯವಸ್ಥೆ ಸುಧಾರಣ ಹಾದಿಯಲ್ಲಿ ಸಾಗುತ್ತಿದೆ. ಸೆಪ್ಟಂಬರ್‌ ಅಂತ್ಯಕ್ಕೆ ಜಿಎಸ್‌ಟಿಯಿಂದ 93,141 ಕೋ. ರೂ. ಹಾಗೂ ಅಕ್ಟೋಬರ್‌ನಲ್ಲಿ 95,133 ಕೋಟಿ ರೂ. ತೆರಿಗೆ ಆದಾಯ ಸಂಗ್ರಹವಾಗಿದೆ. ಜಿಎಸ್‌ಟಿಯಡಿ ತೆರಿಗೆ ಪಾವತಿಸದವರ ಪ್ರಮಾಣ ಆಗಸ್ಟ್‌ನಲ್ಲಿ ಶೇ.28.4ರಷ್ಟಿದ್ದರೆ, ಅಕ್ಟೋಬರ್‌ನಲ್ಲಿ ಈ ಪ್ರಮಾಣ ಶೇ.17.6ಕ್ಕೆ ಇಳಿದಿದೆ. ರೂಪಾಯಿ ಲೆಕ್ಕಾಚಾರದಂತೆ ಕಳೆದ ಆಗಸ್ಟ್‌ನಿಂದ ಅಕ್ಟೋಬರ್‌ವರೆಗೂ 12,208 ಕೋಟಿ ರೂ.ನಿಂದ 7,560 ಕೋಟಿ ರೂಪಾಯಿಗೆ ಇಳಿದಿದೆ ಎಂಬುದನ್ನು ವಿವರಿಸಿದರು.

ವಾಣಿಜ್ಯ ತೆರಿಗೆ ಸಲ್ಲಿಕೆ ಜಿಎಸ್‌ಟಿಯ ಆತ್ಮ ಇದ್ದಂತೆ. ಆದಾಯ ತೆರಿಗೆ ಸಲ್ಲಿಕೆಯ ಪ್ರಮಾಣದಲ್ಲೂ ಸುಧಾರಣೆಯಾಗುತ್ತಿದೆ. ಜಿಎಸ್‌ಟಿಯಲ್ಲಿ ಜಿಎಸ್‌ಟಿ ನೆಟ್‌ವರ್ಕ್‌ ವ್ಯವಸ್ಥೆಯೇ ಬೆನ್ನೆಲುಬು ಎಂದು ಹೇಳಿದರು. ರಾಜ್ಯ ಕೃಷಿ ಸಚಿವ ಕೃಷ್ಣ ಬೈರೇಗೌಡ, ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಸುದ್ದಿಗೋಷ್ಠಿಯಲ್ಲಿದ್ದರು.

ತೆರಿಗೆ ಸಂಗ್ರಹ ಪ್ರಮಾಣ ಇಳಿಕೆ: 17 ರಾಜ್ಯಗಳಲ್ಲಿ ಗರಿಷ್ಠ ತೆರಿಗೆ ಆದಾಯ ಕೊರತೆ ಹೆಚ್ಚಾಗಿದ್ದು, ಕರ್ನಾಟಕ ಸಹಿತ 9 ರಾಜ್ಯಗಳಲ್ಲಿ ತೆರಿಗೆ ಆದಾಯ ಕೊರತೆ ಕಡಿಮೆಯಾಗಿದೆ. 

Advertisement

ದೇಶದ ಎಲ್ಲ ರಾಜ್ಯಗಳ ಜಿಎಸ್‌ಟಿ ಸರಾಸರಿ ತೆರಿಗೆ ಕೊರತೆ ಆದಾಯ ಇಳಿಕೆಯಾಗಿದೆ. 2016-17ನೇ ಸಾಲಿನಲ್ಲಿ ಕೇಂದ್ರ, ರಾಜ್ಯಗಳ ಎಲ್ಲ ತೆರಿಗೆಗಳಿಂದ ಒಟ್ಟು 8.8 ಲಕ್ಷ ಕೋಟಿ ರೂ. ಸಂಗ್ರಹವಾಗಿದೆ. 2017-18ನೇ ಸಾಲಿನಲ್ಲಿ ಜಿಎಸ್‌ಟಿಯಿಂದ ಶೇ.14ರಷ್ಟು  ಪ್ರಗತಿ ನಿರೀಕ್ಷಿಸಿದ್ದೇವೆ. 11.5 ಲಕ್ಷ ಕೋಟಿ ರೂಪಾಯಿ ತೆರಿಗೆ ಬರಬೇಕಿದ್ದು, ತಿಂಗಳಿಗೆ 96 ಸಾವಿರ ಕೋಟಿ ರೂ.ತೆರಿಗೆ ಸಂಗ್ರಹಿಸಬೇಕಿದೆ. ಪ್ರಸ್ತುತ 92 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹಿಸುತ್ತಿದ್ದೇವೆ ಎಂದು ಸುಶೀಲ್‌ ಕುಮಾರ್‌ ಮೋದಿ ಹೇಳಿದರು.

ತಜ್ಞ  ಎಂಜಿನಿಯರ್‌ಗಾಗಿ ಮನವಿ: ಜಿಎಸ್‌ಟಿ ನೆಟ್‌ವರ್ಕ್‌ ಸುಧಾರಿಸುವ ನಿಟ್ಟಿನಲ್ಲಿ ನುರಿತ ಮತ್ತು ಅನುಭವಿ ಎಂಜಿನಿಯರ್‌ಗಳನ್ನು ಒದಗಿಸುವಂತೆ ಇನ್ಫೋಸಿಸ್‌ಗೆ ಮನವಿ ಮಾಡಿದ್ದೇವೆ. ನೆಟ್‌ವರ್ಕ್‌ ಸುಧಾರಣೆಗೆ 100 ಎಂಜಿನಿಯರ್‌ಗಳನ್ನು ನೇಮಿಸಲಾಗಿದೆ. 30 ರಾಜ್ಯಗಳ ನುರಿತ ಅನುಭವಿ ಎಂಜಿನಿಯರ್‌ಗಳು ಒಟ್ಟಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದರು.

ಲಾಭ ನಿಯಂತ್ರಣ 
ಪ್ರಾಧಿಕಾರಕ್ಕೇ ಅಧಿಕಾರ

ಜಿಎಸ್‌ಟಿ ಮಂಡಳಿಯ 23ನೇ ಸಭೆಯಲ್ಲಿ ಸುಮಾರು 200ಕ್ಕೂ ಅಧಿಕ ವಸ್ತುಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗಿತ್ತು. ಇದಾದ ಬಳಿಕ ಕೇಂದ್ರ ಸಚಿವ ಸಂಪುಟ ಸಭೆ ಲಾಭ ನಿಯಂತ್ರಣ ಪ್ರಾಧಿಕಾರ ರಚನೆಗೆ ಅಸ್ತು ನೀಡಿದೆ. ವಸ್ತುವಿನ ತೆರಿಗೆ ಇಳಿಕೆ ಮಾಡಿದ್ದರೂ ಕಡಿಮೆಯಾದ ಬೆಲೆಯ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸದೇ ಇರುವು ದಾಗಿದೆ. ಈ ವಿಚಾರದಲ್ಲಿ ತಪ್ಪು ಮಾಡಿದವರಿಗೆ ಭಾರೀ ಮೊತ್ತದ ದಂಡ, ಜಿಎಸ್‌ಟಿಯಡಿ ನೀಡಲಾದ ಅನುಮತಿಯನ್ನೇ ರದ್ದು ಮಾಡಬಹುದಾಗಿದೆ.
 

Advertisement

Udayavani is now on Telegram. Click here to join our channel and stay updated with the latest news.

Next