Advertisement

ಬಿಲ್ಕಿಸ್ ಬಾನುಗೆ ನ್ಯಾಯ ದೊರಕಿಸಿ ಕೊಡಿ : ಪ್ರಿಯಾಂಕಾ ಗಾಂಧಿ ವಾದ್ರಾ

02:00 PM Aug 25, 2022 | Team Udayavani |

ನವದೆಹಲಿ: ಗುಜರಾತ್ ಗಲಭೆಯಲ್ಲಿ ಬದುಕುಳಿದಿರುವ ಬಿಲ್ಕಿಸ್ ಬಾನುಗೆ ನ್ಯಾಯ ದೊರಕಿಸಿಕೊಡುವಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಗುರುವಾರ ಆಗ್ರಹಿಸಿದ್ದು,” 2002ರಲ್ಲಿ ನಡೆದ ಸಾಮೂಹಿಕ ಅತ್ಯಾಚಾರ, ಆಕೆಯ ಏಳು ಕುಟುಂಬ ಸದಸ್ಯರ ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ 11 ಮಂದಿಯ ಬಿಡುಗಡೆ ಮಾಡಿ ಸರಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ” ಎಂದು ಹೇಳಿದ್ದಾರೆ.

Advertisement

“ಅತ್ಯಾಚಾರದ ಅಪರಾಧಿಗಳ ಬಿಡುಗಡೆಯ ಬಗ್ಗೆ ಮೌನ ವಹಿಸುವ ಮೂಲಕ ಸರ್ಕಾರವು ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಅವರಿಗೆ ಸ್ವಾಗತ-ಬೆಂಬಲವನ್ನು ವ್ಯಕ್ತಪಡಿಸುವ ಕಾಮೆಂಟ್‌ಗಳನ್ನ ಮಾಡಿದೆ ಎಂದು ಪ್ರಿಯಾಂಕಾ ಗಾಂಧಿ ಟ್ವೀಟ್‌ ಮಾಡಿದ್ದಾರೆ.

“ಆದರೆ ದೇಶದ ಮಹಿಳೆಯರಿಗೆ ಸಂವಿಧಾನದ ಮೇಲೆ ಭರವಸೆಯಿದೆ. ನ್ಯಾಯಕ್ಕಾಗಿ ಹೋರಾಡಲು ಕೊನೆಯ ಸಾಲಿನಲ್ಲಿ ನಿಂತಿರುವ ಮಹಿಳೆಗೂ ಸಂವಿಧಾನ ಧೈರ್ಯ ನೀಡುತ್ತದೆ. ಬಿಲ್ಕಿಸ್ ಬಾನುಗೆ ನ್ಯಾಯ ಕೊಡಿ” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹೇಳಿದ್ದಾರೆ.

ಜನವರಿ 21, 2008 ರಂದು ಮುಂಬೈನ ವಿಶೇಷ ಸಿಬಿಐ ನ್ಯಾಯಾಲಯವು 11 ಮಂದಿಗೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಆರೋಪದ ಮೇಲೆ ಜೀವಾವಧಿ ಶಿಕ್ಷೆ ವಿಧಿಸಿತ್ತು, ನಂತರ ಅವರ ಶಿಕ್ಷೆಯನ್ನು ಬಾಂಬೆ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಎತ್ತಿಹಿಡಿದಿತ್ತು.

Advertisement

Udayavani is now on Telegram. Click here to join our channel and stay updated with the latest news.

Next