Advertisement

BJP ರಾಜ್ಯಾಧ್ಯಕ್ಷ ಸ್ಥಾನ ನನಗೆ ಕೊಡಿ: ವರಿಷ್ಠರಿಗೆ ಪತ್ರ ಬರೆದ ಸೋಮಣ್ಣ

10:08 PM Jun 23, 2023 | Team Udayavani |

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೊಸಬರ ನೇಮಕ ವಿಚಾರ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ತಮ್ಮನ್ನು ಅಧ್ಯಕ್ಷ ಸ್ಥಾನಕ್ಕೆ ನೇಮಿಸುವಂತೆ ಮಾಜಿ ಸಚಿವ ವಿ.ಸೋಮಣ್ಣ ವರಿಷ್ಠರಿಗೆ ಪತ್ರ ಬರೆದಿದ್ದಾರೆ. ಇದರೊಂದಿಗೆ ಮಾಜಿ ಸಿಎಂ ಯಡಿಯೂರಪ್ಪ ತೆರೆಮರೆಯಲ್ಲಿ ನಡೆಸುತ್ತಿರುವ ರಾಜಕೀಯ ದಾಳ ಪ್ರಯೋಗಕ್ಕೊಂದು ಬಹಿರಂಗ “ಚೆಕ್‌’ ಕೊಟ್ಟಂತಾಗಿದೆ.

Advertisement

ವರಿಷ್ಠರಿಗೆ ಪತ್ರ ಬರೆದಿರುವ ಬಗ್ಗೆ ಖುದ್ದು ವಿ.ಸೋಮಣ್ಣನವರೇ ಮಾಧ್ಯಮಗಳಿಗೆ ಹೇಳಿಕೆ ನೀಡಿ ತಾವು ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಎಂದು ಪ್ರತಿಪಾದಿಸಿದ್ದಾರೆ. ನಾನು ಚುನಾವಣೆ ಮುಗಿದ ಬಳಿಕ ದೆಹಲಿಗೆ ಎರಡು ಬಾರಿ ಭೇಟಿ ನೀಡಿದ್ದೇನೆ. ಪಕ್ಷ ಸಂಘಟನೆಯ ದೃಷ್ಟಿಯಿಂದ ನನಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡಿ ಎಂದು ಕೇಳಿದ್ದೇನೆ. ಜೊತೆಗೆ ವರಿಷ್ಠರಿಗೆ ಈ ಸಂಬಂಧ ಪತ್ರವನ್ನೂ ಬರೆದಿದ್ದೇನೆ. ನಾನು ಬಿಜೆಪಿಗೆ ಬಂದು 15 ವರ್ಷವಾಗಿದೆ. ಪಕ್ಷ ನನಗೆ ಸ್ಥಾನಮಾನ ನೀಡಿದ್ರೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗದುಕೊಂಡು ಹೋಗುತ್ತೇನೆ ಎಂದು ಹೇಳಿದ್ದಾರೆ.

ಚಿಂಚೋಳಿ, ಹಾನಗಲ್ , ಬಸವಕಲ್ಯಾಣ, ಸಿಂದಗಿ, ಮಸ್ಕಿ ಹಾಗೂ ಲೋಕಸಭಾ ಚುನಾವಣೆಯಲ್ಲಿ ತುಮಕೂರಿನಲ್ಲಿ ನಾನು ಕೆಲಸ ಮಾಡಿದ್ದೇನೆ. ರಾಜ್ಯಾಧ್ಯಕ್ಷ ಹುದ್ದೆ ಉದ್ಯೋಗ ಅಲ್ಲ. ನಾನು ನನ್ನ ಅನುಭವ ಬಳಸಿ ಕೆಲಸ ಮಾಡುತ್ತೇನೆ. ಪಕ್ಷ ಸಂಘಟನೆ ಮಾಡುತ್ತೇನೆ. ಪ್ರಧಾನಿ ಹೊರತು ಪಡಿಸಿ ಅಮಿತ್‌ ಶಾ, ಜೆ.ಪಿ. ನಡ್ಡಾ , ಬಿ.ಎಲ್‌.ಸಂತೋಷ್‌ ಎಲ್ಲರನ್ನೂ ಭೇಟಿ ಮಾಡಿದ್ದೇನೆ ಎಂದರು.

ಯಡಿಯೂರಪ್ಪ ರಾಷ್ಟ್ರೀಯ ನಾಯಕರು, ಸಂಸದೀಯ ಮಂಡಳಿ ಸದಸ್ಯರು. ಯಡಿಯೂರಪ್ಪ ಮನೆಗೂ ಹೋಗುತ್ತೇನೆ. ಅವರೆಲ್ಲರೂ ಕೊಟ್ಟ ಟಾಸ್ಕ ನ್ನು ನಾನು ಒಪ್ಪಿ ಮಾಡಿಲ್ವಾ ? ನಾನು 24/7 ಕೆಲಸ ಮಾಡುತ್ತಿದ್ದವನು. ಈಗ ಕೆಲಸ ಇಲ್ಲದಾಗಿದೆ. ನಾನು ಎಲ್ಲರನ್ನೂ ನಂಬಿಕೆಯಿಂದ ತೆಗೆದುಕೊಂಡು ಹೋಗುತ್ತೇನೆ. ನನ್ನಷ್ಟು ಓಪನ್‌ ಯಾರೂ ಇಲ್ಲ. ನನಗೆ ಅವಕಾಶ ನೀಡಿದರೆ ಗಾಂಭೀರ್ಯದಿಂದ ಕೆಲಸ ಮಾಡುತ್ತೇನೆ. ನೂರು ದಿನ ನನಗೆ ಅವಕಾಶ ಕೊಟ್ಟು ನೋಡಿ, ಕೆಲಸ ಮಾಡಿ ತೋರಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪಕ್ಷಕ್ಕಾಗಿ ನಾನು ತೆಗೆದುಕೊಂಡ ರಿಸ್ಕ್ ಯಾರಾದರೂ ತೆಗೆದುಕೊಂಡಿದ್ದಾರಾ? ಅಶೋಕ್‌ ಕೂಡಾ ಕೇಳಿದ್ದಾರೆ. ಆದರೆ ನನ್ನದೇ ಬೇರೆ, ಅವರದ್ದೇ ಬೇರೆ. ನಾನು ತೆಗೆದುಕೊಂಡ ರಿಸ್ಕ್ ಇವರ್ಯಾರೂ ತೆಗೆದುಕೊಂಡಿಲ್ಲ. ಯಾರು ಯಾರು ಹೊಂದಾಣಿಕೆ ಮಾಡಿಕೊಂಡಿದ್ದಾರೆ ಅನ್ನೋದು ನನಗೆ ಗೊತ್ತಿಲ್ಲ. ಪಕ್ಷಕ್ಕೆ ಹಿನ್ನಡೆ ಆಗಿದೆ, ಹೀಗಾಗಿ ಅವಕಾಶ ಕೊಡಿ ಎಂದು ಹೇಳಿದ್ದೇನೆ. ನನಗೆ ಕೊಡಿ, ಹೊಂದಾಣಿಕೆ ಹೇಗಾಗುತ್ತದೆ ನೋಡೋಣ ಎಂದು ಹೇಳಿದರು.

Advertisement

ರಾಜ್ಯದ ಯಾವ ನಾಯಕರ ಜೊತೆಗೂ ನಾನು ಮಾತನಾಡಿಲ್ಲ. ಇವರ ಕೈಯಲ್ಲಿ ಆಗದೇ ಇರುವ ಕೆಲಸ ನಾನು ಮಾಡಿದ್ದೇನೆ. ಪ್ರಾಣದ ಹಂಗು ತೊರೆದು ಪಕ್ಷಕ್ಕಾಗಿ ಕೆಲಸ ಮಾಡಿದ್ದೇನೆ. ನಾನು ಸೋತಿರಬಹುದು, ಆದರೆ ನನಗೆ ಕೊಟ್ಟ ಟಾಸ್ಕ್ ನಲ್ಲಿ ಸೋತಿಲ್ಲ, ಗೆದ್ದಿದ್ದೇನೆ. ಸೋಲಿನ ಬಗ್ಗೆ ಯಾರಿಗೆ ತಿಳಿಸಬೇಕೋ ಅವರಿಗೆ ನಾನು ತಿಳಿಸಿದ್ದೇನೆ. ನನಗೆ ರಾಜ್ಯಾಧ್ಯಕ್ಷ ಸ್ಥಾನ ಯಾಕೆ ಕೊಡಲ್ಲ? ಕೊಡಲೇಬೇಕು ಎಂದು ಆಗ್ರಹಿಸಿದರು.
ಅಶೋಕ್‌ ರಾಜ್ಯಾಧ್ಯಕ್ಷ ಆದರೆ ಬೇಡ ಅಂತೀವಾ? ಕನಕಪುರದಲ್ಲಿ ಅಶೋಕ್‌ ರಿಸ್ಕ್ ತೆಗೆದುಕೊಂಡಿಲ್ಲ ಎಂದು ಜನರೇ ಮಾತನಾಡಿಕೊಳ್ಳುತ್ತಿದ್ದಾರೆ. ಇವರೆಲ್ಲರಿಗಿಂತ ನಾನು ಚೆನ್ನಾಗಿ ಕೆಲಸ ಮಾಡಿದ್ದೇನೆ ಎಂದರು.

ನಾನು ರಾಜ್ಯಾಧ್ಯಕ್ಷ ಆಗುವುದಕ್ಕೆ ಯಡಿಯೂರಪ್ಪ ನವರು ಒಪ್ಪಿಕೊಳ್ಳಬೇಕು, ಬೇರೆಯವರೂ ಒಪ್ಪಿಕೊಳ್ಳಬೇಕು. ನಾವು ಇಷ್ಟು ದಿನ ಯಡಿಯೂರಪ್ಪ ಹೇಳಿದ್ದನ್ನು ಕೇಳಿಲ್ವಾ? ಚುನಾವಣೆ ಮುಗಿದ ನಂತರ ಒಂದು ಫೋನ್‌ ಕೂಡ ಅವರು ನನಗೆ ಮಾಡಿಲ್ಲ. ಯಾರು ಯಾರಿಗಿಂತಲೂ ದೊಡ್ಡವರಲ್ಲ. ಪಕ್ಷ ಮಾತ್ರ ದೊಡ್ಡದು. ನಂದು ನಂದೇ, ಅವರದ್ದು ಅವರದ್ದೇ. ನನಗೆ ಅವರ ಮೇಲೆ ಗೌರವ ಇದೆ. ನಾನು ಚುನಾವಣೆಗೆ ಮುನ್ನವೇ ರಾಜ್ಯಾಧ್ಯಕ್ಷ ಸ್ಥಾನ ಕೇಳಿದ್ದೆ ಎಂದರು.

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಎದುರು ಕೆಲಸ ಮಾಡಲು ನಮ್ಮ ಅತಿರಥ ಮಹಾರಥರು ಮುಂದಾಗಿರಲಿಲ್ಲ. ಆದರೆ ನಾನು ಮಾಡಿದ್ದೇನೆ. ಇಲ್ಲವಾಗಿದ್ದರೆ ಸಿದ್ದರಾಮಯ್ಯ ಎದುರು ನಿಲ್ಲಲು ನನಗೆ ಹುಚ್ಚು ಹಿಡಿದಿತ್ತಾ? ಯಡಿಯೂರಪ್ಪ ಪಕ್ಷ ಕಟ್ಟಿ ಬೆಳೆಸಿ¨ªಾರೆ. ಆದರೆ ಬಿಜೆಪಿ ಕೆಜೆಪಿ ಆದಾಗ ಏನೆಲ್ಲಾ ಆಗಿದೆ ಎಂಬುದು ಗೊತ್ತಿದೆ. ನೂರು ದಿನಗಳ ಕಾಲ ನನಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡಿ. ಪಕ್ಷದ ಸಂಘಟನೆಯನ್ನು ಯಾವ ರೀತಿ ತೊಡಗಿಸಿಕೊಳ್ಳಬಹುದು ಎಂದು ತೋರಿಸಿಕೊಡುತ್ತೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next