Advertisement
ಕೆ.ಆರ್.ಪೇಟೆಯಲ್ಲಿ ಆರೋಗ್ಯ ಇಲಾಖೆ ಮತ್ತು ನಾರಾಯಣಗೌಡ ಅಭಿಮಾನಿಗಳ ಬಳಗದ ಸಹಯೋಗದಲ್ಲಿ ಆಯೋಜಿಸಿದ್ದ ಬೃಹತ್ ಆರೋಗ್ಯ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮಂಡ್ಯದ ಮಣ್ಣಿನಲ್ಲಿ ಹುಟ್ಟಿ, ಶಿವಮೊಗ್ಗದಲ್ಲಿ ಬೆಳೆದ ಯಡಿಯೂರಪ್ಪನವರು, ರಾಜ್ಯದ ಸಿಎಂ ಆಗಿದ್ದಾರೆ. ಅವರ ತಂದೆಯವರ ಹೆಸರಿನಲ್ಲಿ ಮೆಡಿಕಲ್ ಕಾಲೇಜು ನೀಡಿದರೆ ತವರು ಜಿಲ್ಲೆಗೆ ಕೊಡುಗೆ ನೀಡಿದಂತಾಗುವುದು ಎಂದು ಹೇಳಿದರು.
Related Articles
Advertisement
ನಾರಾಯಣಗೌಡ ಬಿಜೆಪಿ ಅಭ್ಯರ್ಥಿ?: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ನಾರಾಯಣಗೌಡರು ಒಬ್ಬ ಅಪರೂಪದ ಸಜ್ಜನ ರಾಜಕಾರಣಿ. ಇಂತಹ ವ್ಯಕ್ತಿಯನ್ನು ನಿಮ್ಮ ಪ್ರತಿನಿಧಿಯಾಗಿ ಆಯ್ಕೆ ಮಾಡಿದ್ದಿರಿ. ಆದರೆ, ಬೇರೆ, ಬೇರೆ ಕಾರಣಗಳಿಂದ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗಿ ಬಂತು. ಮುಂದೆ ನಡೆಯುವ ಉಪ ಚುನಾವಣೆಯಲ್ಲಿ ಅವರಿಗೆ ನೀವು ಮತ್ತೆ ಆಶೀರ್ವಾದ ಮಾಡಬೇಕು ಎನ್ನುವ ಮೂಲಕ ಕೆ.ಆರ್.ಪೇಟೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂಬ ಗುಟ್ಟನ್ನು ಪರೋಕ್ಷವಾಗಿ ಬಿಚ್ಚಿಟ್ಟರು.
ಮಂಡ್ಯ ಜಿಲ್ಲೆಯಲ್ಲಿ ಎರಡು ಪ್ರಮುಖ ಕಾರ್ಖಾನೆಗಳು ಸ್ಥಗಿತವಾಗಿರುವುದರಿಂದ ಕಾರ್ಯ ನಿರ್ವಹಿಸುತ್ತಿರುವ ಇತರ ಕಾರ್ಖಾನೆಗಳಿಗೆ ರೈತರ ಕಬ್ಬನ್ನು ಕಟಾವು ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಆದರೂ ಕಬ್ಬು ಉಳಿದು ಕೊಂಡರೆ ಪಕ್ಕದ ರಾಜ್ಯಗಳಲ್ಲಿರುವ ಕಾರ್ಖಾನೆಗಳೊಂದಿಗೆ ಮಾತನಾಡಿ, ನಮ್ಮ ಜಿಲ್ಲೆಯ ಕಬ್ಬನ್ನು ಹೊರ ರಾಜ್ಯಕ್ಕೆ ಸಾಗಣೆ ಮಾಡಿಸುವ ಬಗ್ಗೆ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ.-ಯಡಿಯೂರಪ್ಪ, ಮುಖ್ಯಮಂತ್ರಿ