Advertisement

ನಾರಾಯಣ ಗುರುಗಳ ಸಮುದಾಯಕ್ಕೆ ಮೆಡಿಕಲ್‌ ಕಾಲೇಜು ಕೊಡಿ: ಹರಿಪ್ರಸಾದ್‌

07:23 PM Mar 09, 2022 | Team Udayavani |

ಬೆಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ ಸಮುದಾಯಕ್ಕೆ ಮೆಡಿಕಲ್‌ ಕಾಲೇಜು ನೀಡುವಂತೆ ವಿಧಾನಪರಿಷತ್ತಿನ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್‌ ಆಗ್ರಹಿಸಿದರು.

Advertisement

ಪರಿಷತ್ತಿನಲ್ಲಿ 2022-23ನೇ ಸಾಲಿನ ಬಜೆಟ್‌ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು, ನಾರಾಯಣ ಗುರುಗಳ ಹೆಸರಲ್ಲಿ ನಾಲ್ಕು ವಸತಿ ಶಾಲೆಗಳನ್ನು ಪ್ರಾಂಭಿಸುವುದಾಗಿ ಸರಕಾರ ಬಜೆಟ್‌ನಲ್ಲಿ ಹೇಳಿದೆ. ಅದಕ್ಕಿಂತ ಮುಖ್ಯವಾಗಿ ಆ ಸಮುದಾಯಕ್ಕೆ ಒಂದು ಮೆಡಿಕಲ್‌ ಕಾಲೇಜು ಇಲ್ಲ. ಆದ್ದರಿಂದ ನಾರಾಯಣ ಗುರುಗಳ ಸಮುದಾಯಕ್ಕೆ ಒಂದು ಮೆಡಿಕಲ್‌ ಕಾಲೇಜು ನೀಡುವಂತೆ ಸರಕಾರವನ್ನು ಆಗ್ರಹಿಸಿದರು.

ಇದನ್ನೂ ಓದಿ:ಎಡದಂಡೆ ಕಾಲುವೆ ಕುಸಿತಕ್ಕೆ ಶಾಶ್ವತ ಪರಿಹಾರ ಎಂದು? ಸತತ ನಾಲ್ಕು ಬಾರಿ ಕುಸಿತಗೊಂಡ ಕಾಲುವೆ

ಗಣರಾಜ್ಯೋತ್ಸವ ಪಥಸಂಚಲನದಲ್ಲಿ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ತಿರಸ್ಕರಿಸಲಾಗಿತ್ತು. ಅದರ ಪರಿಣಾಮ ಇಡೀ ಕರಾವಳಿ ಭಾಗದಲ್ಲಿ ಬಹಳ ದೊಡ್ಡ ವಿರೋಧ ವ್ಯಕ್ತವಾಯಿತು. ಅದನ್ನು ಸರಿಪಡಿಸಲು ನಾರಾಯಣ ಗುರುಗಳ ಹೆಸರಲ್ಲಿ ವಸತಿ ಶಾಲೆಗಳನ್ನು ಘೋಷಿಸಲಾಗಿದೆ. ಇದರಿಂದ ಯಾವುದೇ ಪ್ರಯೋಜನವಿಲ್ಲ. ಅದರ ಬದಲಿಗೆ ಮೆಡಿಕಲ್‌ ಕಾಲೇಜು ಕೊಡಬೇಕು ಎಂದು ಹರಿಪ್ರಸಾದ್‌ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next